ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

ತುರುವೇಕೆರೆ: ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಮರಳಿದ ಯೋಧ ಜಿ.ಎಸ್.ಚಿರಂಜೀವಿ ಅವರನ್ನು ಗೋಣಿ ತುಮಕೂರು ಗ್ರಾಮಸ್ಥರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡರು.
ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಎಪಿಎಂಸಿ ಸದಸ್ಯ ವಿಜಯಕುಮಾರ್, ಮುಖಂಡ ಗುಡ್ಡೇನಹಳ್ಳಿ ಮಂಜುನಾಥ್ ಸೇರಿ ಮೈಸೂರು ಪೇಟ, ಶಾಲು ಹಾಕಿ ಸನ್ಮಾನಿಸಿದರು.
ಪಟ್ಟಣದ ನಾಗರಿಕರು, ವಿವಿಧ ರಾಜಕೀಯ ಮುಖಂಡರು, ಆಟೊ ಚಾಲಕರು, ನಾಗರಿಕರು, ಎಬಿವಿಪಿ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಕಾರ್ಯಕರ್ತರು ಭಾಗವಹಿಸಿ ಸನ್ಮಾನಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ವೀರಯೋಧನನ್ನು ಮೆರವಣಿಗೆ ನಡೆಸಿದ ಅಭಿಮಾನಿಗಳು ರಸ್ತೆಯುದ್ದಕ್ಕೂ ನಿವೃತ್ತ ಯೋಧನ ಮೇಲೆ ಹೂಮಳೆಗರೆದರು. ರಸ್ತೆ ಅಕ್ಕಪಕ್ಕ ನಿಂತ ಜನರು ಅಭಿನಂದನೆ ಸಲ್ಲಿಸಿದರು. ಯೋಧನ ಕುಟುಂಬಸ್ಥರು, ಸಂಬಂಧಿಕರು ಹಾಗೂ ಗ್ರಾಮದ ಜನರು ಹಬ್ಬದೋಪಾದಿಯಲ್ಲಿ ಆಚರಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.