<p><strong>ತುಮಕೂರು:</strong> ಕೇಂದ್ರ ಸರ್ಕಾರ ಎನ್ಡಿಎ ಹೊರತಾದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಜನರು ಬದುಕಲಾಗದ ಹೊಸ ಕಾನೂನು ಜಾರಿ ಮಾಡುತ್ತಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮೀನಾಕ್ಷಿ ಸುಂದರಂ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಪಿಎಂ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>ದುಡಿಯುವ ಜನರಿಗೆ ನ್ಯಾಯೋಚಿತ ಪಾಲು ಕೊಡುತ್ತಿಲ್ಲ. ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದೆ. ಸಂವಿಧಾನ ವಿರೋಧಿ ಪ್ರಯತ್ನ ನಡೆಸುತ್ತಿದೆ. ಇದು ಖಂಡನೀಯ, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್, ‘ರೈತರ, ಬಡವರ ಭೂಮಿ ಕಿತ್ತುಕೊಂಡು ಬಂಡವಾಳಗಾರರಿಗೆ ಕೊಡುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ನಿವೇಶನ ರಹಿತರಿಗೆ ವಸತಿ- ನಿವೇಶನ ನೀಡಲು ಭೂಮಿ ಸಿಗುವುದಿಲ್ಲ, ಅದೇ ಬಂಡವಾಳಗಾರರಿಗೆ ಕೊಡಲು ಎಲ್ಲಿಂದ ಬರುತ್ತದೆ’ ಎಂದು ಪ್ರಶ್ನಿಸಿದರು.</p>.<p>ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಬಿ.ಉಮೇಶ್, ‘ಸರ್ಕಾರಿ ಇಲಾಖೆಗಳಲ್ಲಿ ಲಂಚದ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಬಡವರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಪಿಎಂ ಹೋರಾಟ ನಡೆಸಲಾಗುವುದು’ ಎಂದರು.</p>.<p>ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಪದಾಧಿಕಾರಿಗಳಾದ ಜಿ.ಲೋಕೇಶ್, ಅಜ್ಜಪ್ಪ, ಷಣ್ಮುಖಪ್ಪ, ಶಾಹತಾಜ್, ರಂಗಧಾಮಯ್ಯ, ದೊಡ್ಡನಂಜಪ್ಪ, ಮುನ್ನಾಫ್, ಶಿವಕುಮಾರ, ಸುಜಿತ್ನಾಯಕ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೇಂದ್ರ ಸರ್ಕಾರ ಎನ್ಡಿಎ ಹೊರತಾದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಜನರು ಬದುಕಲಾಗದ ಹೊಸ ಕಾನೂನು ಜಾರಿ ಮಾಡುತ್ತಿದೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಮೀನಾಕ್ಷಿ ಸುಂದರಂ ಆಕ್ರೋಶ ವ್ಯಕ್ತಪಡಿಸಿದರು.</p>.<p>ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಪಿಎಂ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.</p>.<p>ದುಡಿಯುವ ಜನರಿಗೆ ನ್ಯಾಯೋಚಿತ ಪಾಲು ಕೊಡುತ್ತಿಲ್ಲ. ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದೆ. ಸಂವಿಧಾನ ವಿರೋಧಿ ಪ್ರಯತ್ನ ನಡೆಸುತ್ತಿದೆ. ಇದು ಖಂಡನೀಯ, ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸೈಯದ್ ಮುಜೀಬ್, ‘ರೈತರ, ಬಡವರ ಭೂಮಿ ಕಿತ್ತುಕೊಂಡು ಬಂಡವಾಳಗಾರರಿಗೆ ಕೊಡುತ್ತಿದ್ದಾರೆ. ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ, ನಿವೇಶನ ರಹಿತರಿಗೆ ವಸತಿ- ನಿವೇಶನ ನೀಡಲು ಭೂಮಿ ಸಿಗುವುದಿಲ್ಲ, ಅದೇ ಬಂಡವಾಳಗಾರರಿಗೆ ಕೊಡಲು ಎಲ್ಲಿಂದ ಬರುತ್ತದೆ’ ಎಂದು ಪ್ರಶ್ನಿಸಿದರು.</p>.<p>ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿಯ ಸದಸ್ಯ ಬಿ.ಉಮೇಶ್, ‘ಸರ್ಕಾರಿ ಇಲಾಖೆಗಳಲ್ಲಿ ಲಂಚದ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಬಡವರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಇದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಸಿಪಿಎಂ ಹೋರಾಟ ನಡೆಸಲಾಗುವುದು’ ಎಂದರು.</p>.<p>ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಪದಾಧಿಕಾರಿಗಳಾದ ಜಿ.ಲೋಕೇಶ್, ಅಜ್ಜಪ್ಪ, ಷಣ್ಮುಖಪ್ಪ, ಶಾಹತಾಜ್, ರಂಗಧಾಮಯ್ಯ, ದೊಡ್ಡನಂಜಪ್ಪ, ಮುನ್ನಾಫ್, ಶಿವಕುಮಾರ, ಸುಜಿತ್ನಾಯಕ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>