<p><strong>ತುಮಕೂರು:</strong> ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ, ಉಪಗ್ರಾಮ, ಬಡಾವಣೆ ರಚನೆ ಬಗ್ಗೆ ಒಂದು ವಾರದಲ್ಲಿ ಪ್ರಸ್ತಾವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಲ್ಲಿ ಮಂಗಳವಾರ ನಿರ್ದೇಶಿಸಿದರು.</p>.<p>ಕಂದಾಯ ಇಲಾಖೆ, ಜಿಲ್ಲಾ ಪಂಚಾಯಿತಿ, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಸಹಯೋಗದಲ್ಲಿ ಕಂದಾಯ ಗ್ರಾಮ, ಉಪಗ್ರಾಮ ಹಾಗೂ ಬಡಾವಣೆ ರಚನೆ ಸಂಬಂಧ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>50ಕ್ಕೂ ಹೆಚ್ಚಿನ ಸಂಖ್ಯೆಯ ಮನೆಗಳು ಅಥವಾ 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದರೆ ಕಂದಾಯ ಗ್ರಾಮವನ್ನಾಗಿ ಗುರುತಿಸಬೇಕು. ಇಂತಹ ಗ್ರಾಮ ಮೂಲ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ಇರಬೇಕು. 10ಕ್ಕೂ ಅಧಿಕ, 50ಕ್ಕಿಂತ ಕಡಿಮೆ ಮನೆಗಳನ್ನು ಹೊಂದಿರುವ ಹಾಗೂ ಕಂದಾಯ ಗ್ರಾಮವಾಗಲು ಅರ್ಹವಲ್ಲದ ಜನವಸತಿ ಪ್ರದೇಶವನ್ನು ಉಪ ಗ್ರಾಮವನ್ನಾಗಿ ಪರಿಗಣಿಸಿ ಪ್ರಸ್ತಾವ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಆಯುಕ್ತಾಲಯದ ತಹಶೀಲ್ದಾರ್ ಗಣಪತಿಶಾಸ್ತ್ರಿ, ಕಂದಾಯ ಗ್ರಾಮ ರಚನೆಯ ಕಾಯ್ದೆ, ನಿಯಮ, ಉಪ ಗ್ರಾಮಗಳಿಗಿರಬೇಕಾದ ಅರ್ಹತೆ, ಪ್ರಸ್ತಾವ ತಯಾರಿಕೆ, ಕಂದಾಯ ಗ್ರಾಮಗಳನ್ನಾಗಿ ಮಾಡುವ ಮುನ್ನ ಅಧಿಸೂಚನೆ, ಹಕ್ಕುಪತ್ರ ನೀಡಿಕೆ, ಹಕ್ಕುಪತ್ರ ತಂತ್ರಾಂಶ ನಿರ್ವಹಣೆ, ಹಕ್ಕುಪತ್ರ ತಿದ್ದುಪಡಿ ಬಗ್ಗೆ ಮಾಹಿತಿ ನೀಡಿದರು.</p>.<p>ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ನಾಹಿದಾ ಜಮ್ ಜಮ್, ಸಪ್ತಶ್ರೀ, ತಹಶೀಲ್ದಾರರಾದ ಮಂಜುನಾಥ, ಶಿರಿನ್ ತಾಜ್, ಪಿ.ಎಸ್.ರಾಜೇಶ್ವರಿ, ಮೋಹನ್ಕುಮಾರ್, ಎನ್.ಎ.ಕುಂಜಿ ಅಹಮದ್, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಗ್ರಾಮ ಆಡಳಿತಾಧಿಕಾರಿಗಳು, ಪಿಡಿಒ, ಕಂದಾಯ ನಿರೀಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲೆಯಲ್ಲಿ ಹೊಸದಾಗಿ ಕಂದಾಯ ಗ್ರಾಮ, ಉಪಗ್ರಾಮ, ಬಡಾವಣೆ ರಚನೆ ಬಗ್ಗೆ ಒಂದು ವಾರದಲ್ಲಿ ಪ್ರಸ್ತಾವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಂದಾಯ ಇಲಾಖೆ ಅಧಿಕಾರಿಗಳಿಗೆ ಇಲ್ಲಿ ಮಂಗಳವಾರ ನಿರ್ದೇಶಿಸಿದರು.</p>.<p>ಕಂದಾಯ ಇಲಾಖೆ, ಜಿಲ್ಲಾ ಪಂಚಾಯಿತಿ, ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆ ಸಹಯೋಗದಲ್ಲಿ ಕಂದಾಯ ಗ್ರಾಮ, ಉಪಗ್ರಾಮ ಹಾಗೂ ಬಡಾವಣೆ ರಚನೆ ಸಂಬಂಧ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>50ಕ್ಕೂ ಹೆಚ್ಚಿನ ಸಂಖ್ಯೆಯ ಮನೆಗಳು ಅಥವಾ 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದರೆ ಕಂದಾಯ ಗ್ರಾಮವನ್ನಾಗಿ ಗುರುತಿಸಬೇಕು. ಇಂತಹ ಗ್ರಾಮ ಮೂಲ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ಇರಬೇಕು. 10ಕ್ಕೂ ಅಧಿಕ, 50ಕ್ಕಿಂತ ಕಡಿಮೆ ಮನೆಗಳನ್ನು ಹೊಂದಿರುವ ಹಾಗೂ ಕಂದಾಯ ಗ್ರಾಮವಾಗಲು ಅರ್ಹವಲ್ಲದ ಜನವಸತಿ ಪ್ರದೇಶವನ್ನು ಉಪ ಗ್ರಾಮವನ್ನಾಗಿ ಪರಿಗಣಿಸಿ ಪ್ರಸ್ತಾವ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಆಯುಕ್ತಾಲಯದ ತಹಶೀಲ್ದಾರ್ ಗಣಪತಿಶಾಸ್ತ್ರಿ, ಕಂದಾಯ ಗ್ರಾಮ ರಚನೆಯ ಕಾಯ್ದೆ, ನಿಯಮ, ಉಪ ಗ್ರಾಮಗಳಿಗಿರಬೇಕಾದ ಅರ್ಹತೆ, ಪ್ರಸ್ತಾವ ತಯಾರಿಕೆ, ಕಂದಾಯ ಗ್ರಾಮಗಳನ್ನಾಗಿ ಮಾಡುವ ಮುನ್ನ ಅಧಿಸೂಚನೆ, ಹಕ್ಕುಪತ್ರ ನೀಡಿಕೆ, ಹಕ್ಕುಪತ್ರ ತಂತ್ರಾಂಶ ನಿರ್ವಹಣೆ, ಹಕ್ಕುಪತ್ರ ತಿದ್ದುಪಡಿ ಬಗ್ಗೆ ಮಾಹಿತಿ ನೀಡಿದರು.</p>.<p>ಉಪ ವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ, ನಾಹಿದಾ ಜಮ್ ಜಮ್, ಸಪ್ತಶ್ರೀ, ತಹಶೀಲ್ದಾರರಾದ ಮಂಜುನಾಥ, ಶಿರಿನ್ ತಾಜ್, ಪಿ.ಎಸ್.ರಾಜೇಶ್ವರಿ, ಮೋಹನ್ಕುಮಾರ್, ಎನ್.ಎ.ಕುಂಜಿ ಅಹಮದ್, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಗ್ರಾಮ ಆಡಳಿತಾಧಿಕಾರಿಗಳು, ಪಿಡಿಒ, ಕಂದಾಯ ನಿರೀಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>