<p><strong>ಗುಬ್ಬಿ:</strong> ತಾಲ್ಲೂಕಿನಲ್ಲಿ ಅರ್ಹವಿರುವ ಎಲ್ಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕೆಲಸ ಹೆಚ್ಚಿನ ವೇಗದಲ್ಲಿ ಸಾಗುತ್ತಿದೆ. ಈ ನಿರ್ಣಯದಿಂದ ಗ್ರಾಮಗಳಿಗೆ ಸರ್ಕಾರಿ ಸೌಲಭ್ಯ ಸರಿಯಾಗಿ ತಲುಪಲು ಸಾಧ್ಯವಾಗಲಿದೆ.</p>.<p>ಸರ್ವೆ ನಂಬರ್ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದರೂ, ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದ ನಿವಾಸಿಗಳ ಸಮಸ್ಯೆ ಗಮನಿಸಿದ ಸರ್ಕಾರ, ಎಲ್ಲ ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಸೂಚನೆ ನೀಡಿತ್ತು. ಅದರಂತೆ ತಾಲ್ಲೂಕು ಆಡಳಿತ ಕಾರ್ಯನಿರ್ವಹಿಸುತ್ತಿದೆ.</p>.<p>ತಾಲ್ಲೂಕಿನಲ್ಲಿ ಈಗಾಗಲೇ ಸುಮಾರು 2ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಕ್ರಮದೊಂದಿಗೆ ಗುಬ್ಬಿ ತಾಲ್ಲೂಕು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಂದಾಯ ಗ್ರಾಮಗಳನ್ನು ರಚಿಸಿದ ತಾಲ್ಲೂಕಾಗಿದೆ.</p>.<p>ತಾಲ್ಲೂಕಿನ ಎಲ್ಲ ಕಂದಾಯ ವೃತ್ತಗಳಲ್ಲಿ ಅರ್ಹರಾದ ಫಲಾನುಭವಿಗಳನ್ನು ಗುರುತಿಸಿ, ದಾಖಲೆಗಳನ್ನು ಸಂಗ್ರಹಿಸಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.</p>.<p>ತುಮಕೂರು ಉಪವಿಭಾಗೀಯ ಅಧಿಕಾರಿ ನೇತೃತ್ವದಲ್ಲಿ ವಿಚಾರಣೆ ನಡೆಸಿ, ಅರ್ಹ ಫಲಾನುಭವಿಗಳು ವಾಸಿಸುತ್ತಿರುವ ಜಾಗಗಳನ್ನು ನೋಂದಣಿ ಮಾಡಿ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. </p>.<p>ತಾಲ್ಲೂಕಿನ ಯಾವುದೇ ಗ್ರಾಮದ ಫಲಾನುಭವಿಯು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ತಾಲ್ಲೂಕು ಆಡಳಿತ ತಿಳಿಸಿದೆ. </p>.<p>‘ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ, ಆದರೆ, ದಾಖಲೆ ಇಲ್ಲದೆ ಏನೂ ಸೌಲಭ್ಯ ಪಡೆಯಲಾಗುತ್ತಿರಲಿಲ್ಲ. ಈಗ ಹಕ್ಕು ಪತ್ರ ಬಂತು. ಇದು ನಮ್ಮ ಬಾಳಿಗೆ ನೆಮ್ಮದಿ ತಂದಿದೆ’ ಎಂದು ಫಲಾನುಭವಿ ಕರಿಯಪ್ಪ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ತಾಲ್ಲೂಕಿನಲ್ಲಿ ಅರ್ಹವಿರುವ ಎಲ್ಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕೆಲಸ ಹೆಚ್ಚಿನ ವೇಗದಲ್ಲಿ ಸಾಗುತ್ತಿದೆ. ಈ ನಿರ್ಣಯದಿಂದ ಗ್ರಾಮಗಳಿಗೆ ಸರ್ಕಾರಿ ಸೌಲಭ್ಯ ಸರಿಯಾಗಿ ತಲುಪಲು ಸಾಧ್ಯವಾಗಲಿದೆ.</p>.<p>ಸರ್ವೆ ನಂಬರ್ ಪ್ರದೇಶಗಳಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದರೂ, ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದ ನಿವಾಸಿಗಳ ಸಮಸ್ಯೆ ಗಮನಿಸಿದ ಸರ್ಕಾರ, ಎಲ್ಲ ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಸೂಚನೆ ನೀಡಿತ್ತು. ಅದರಂತೆ ತಾಲ್ಲೂಕು ಆಡಳಿತ ಕಾರ್ಯನಿರ್ವಹಿಸುತ್ತಿದೆ.</p>.<p>ತಾಲ್ಲೂಕಿನಲ್ಲಿ ಈಗಾಗಲೇ ಸುಮಾರು 2ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ. ಈ ಕ್ರಮದೊಂದಿಗೆ ಗುಬ್ಬಿ ತಾಲ್ಲೂಕು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕಂದಾಯ ಗ್ರಾಮಗಳನ್ನು ರಚಿಸಿದ ತಾಲ್ಲೂಕಾಗಿದೆ.</p>.<p>ತಾಲ್ಲೂಕಿನ ಎಲ್ಲ ಕಂದಾಯ ವೃತ್ತಗಳಲ್ಲಿ ಅರ್ಹರಾದ ಫಲಾನುಭವಿಗಳನ್ನು ಗುರುತಿಸಿ, ದಾಖಲೆಗಳನ್ನು ಸಂಗ್ರಹಿಸಿ ಸಲ್ಲಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ನೀಡಿದ್ದಾರೆ.</p>.<p>ತುಮಕೂರು ಉಪವಿಭಾಗೀಯ ಅಧಿಕಾರಿ ನೇತೃತ್ವದಲ್ಲಿ ವಿಚಾರಣೆ ನಡೆಸಿ, ಅರ್ಹ ಫಲಾನುಭವಿಗಳು ವಾಸಿಸುತ್ತಿರುವ ಜಾಗಗಳನ್ನು ನೋಂದಣಿ ಮಾಡಿ ಅವರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. </p>.<p>ತಾಲ್ಲೂಕಿನ ಯಾವುದೇ ಗ್ರಾಮದ ಫಲಾನುಭವಿಯು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ತಾಲ್ಲೂಕು ಆಡಳಿತ ತಿಳಿಸಿದೆ. </p>.<p>‘ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ, ಆದರೆ, ದಾಖಲೆ ಇಲ್ಲದೆ ಏನೂ ಸೌಲಭ್ಯ ಪಡೆಯಲಾಗುತ್ತಿರಲಿಲ್ಲ. ಈಗ ಹಕ್ಕು ಪತ್ರ ಬಂತು. ಇದು ನಮ್ಮ ಬಾಳಿಗೆ ನೆಮ್ಮದಿ ತಂದಿದೆ’ ಎಂದು ಫಲಾನುಭವಿ ಕರಿಯಪ್ಪ ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>