<p><strong>ತುಮಕೂರು:</strong> ಕ್ಯಾನ್ಸರ್ ಲಕ್ಷಣಗಳು ಕಂಡು ಬಂದ ತಕ್ಷಣ ಚಿಕಿತ್ಸೆ ಪಡೆದರೆ ರೋಗ ವಾಸಿ ಮಾಡಬಹುದು. ಯಾರೂ ಭಯ ಪಡುವ ಅಗತ್ಯ ಇಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ರಂಗಸ್ವಾಮಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಭಾರತೀಯ ವೈದ್ಯಕೀಯ ಸಂಘ ಹಾಗೂ ಸರ್ಜಿಕಲ್ ಸೊಸೈಟಿ, ಆಸ್ಟರ್ ಸಿಎಂಐ ಆಸ್ಪತ್ರೆ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಆರೈಕೆಯ ಅಂತರ ಮುಚ್ಚಿ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಕ್ಯಾನ್ಸರ್ ದಿನ ಆಚರಿಸಲಾಗುತ್ತಿದೆ. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಮ್ಮಲ್ಲಿ ಕ್ಯಾನ್ಸರ್ ಪತ್ತೆ ವಿಳಂಬದಿಂದ ಅಪಾಯ ಸಂಭವಿಸುತ್ತಿದೆ. ನಿಗದಿತ ಸಮಯದಲ್ಲಿ ಕ್ಯಾನ್ಸರ್ ತಪಾಸಣೆ ಮಾಡಿಸಿ ಕೊಂಡರೆ ಈ ಕಾಯಿಲೆಯಿಂದ ಮುಕ್ತರಾಗಬಹುದು’ ಎಂದು ತಿಳಿಸಿದರು.</p>.<p>ವೈದ್ಯೆ ಎನ್.ಸುನೀತಾ, ‘ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ನಲ್ಲಿ ಶೇ 26ರಷ್ಟು ಸ್ತನ ಕ್ಯಾನ್ಸರ್ ಇರುತ್ತದೆ. ಅರಿವಿನ ಕೊರತೆ, ತಪಾಸಣೆಯ ಹಿಂಜರಿಕೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಾಗುತ್ತಿವೆ’ ಎಂದರು.</p>.<p>ಐಎಂಎ ಕಾರ್ಯದರ್ಶಿ ಡಾ.ಜಿ.ಮಹೇಶ್, ‘ಅಸೋಸಿಯೇಶನ್ ಆಫ್ ಸರ್ಜನ್ ಇಂಡಿಯಾ’ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪ್ರಶಾಂತ್ ಬಿ.ನಿರ್ವಾಣಿರಾವ್, ಕಾರ್ಯದರ್ಶಿ ಡಾ.ಚೇತನ್, ಸರ್ಜಿಕಲ್ ಆಂಕಾಲಜಿ ಸಲಹೆಗಾರರಾದ ಡಾ.ಜಿ.ಗಿರೀಶ್, ಡಾ.ದರ್ಶನ್ ಪಾಟೀಲ್, ಡಾ.ಸಿ.ಎಚ್.ಪುಷ್ಪಾನಾಗ್, ಡಾ.ಮಂಜುನಾಥ್, ಡಾ.ಅನಿತಾ ಬಿ.ಗೌಡ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕ್ಯಾನ್ಸರ್ ಲಕ್ಷಣಗಳು ಕಂಡು ಬಂದ ತಕ್ಷಣ ಚಿಕಿತ್ಸೆ ಪಡೆದರೆ ರೋಗ ವಾಸಿ ಮಾಡಬಹುದು. ಯಾರೂ ಭಯ ಪಡುವ ಅಗತ್ಯ ಇಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ರಂಗಸ್ವಾಮಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಭಾರತೀಯ ವೈದ್ಯಕೀಯ ಸಂಘ ಹಾಗೂ ಸರ್ಜಿಕಲ್ ಸೊಸೈಟಿ, ಆಸ್ಟರ್ ಸಿಎಂಐ ಆಸ್ಪತ್ರೆ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಆರೈಕೆಯ ಅಂತರ ಮುಚ್ಚಿ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಕ್ಯಾನ್ಸರ್ ದಿನ ಆಚರಿಸಲಾಗುತ್ತಿದೆ. ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಮ್ಮಲ್ಲಿ ಕ್ಯಾನ್ಸರ್ ಪತ್ತೆ ವಿಳಂಬದಿಂದ ಅಪಾಯ ಸಂಭವಿಸುತ್ತಿದೆ. ನಿಗದಿತ ಸಮಯದಲ್ಲಿ ಕ್ಯಾನ್ಸರ್ ತಪಾಸಣೆ ಮಾಡಿಸಿ ಕೊಂಡರೆ ಈ ಕಾಯಿಲೆಯಿಂದ ಮುಕ್ತರಾಗಬಹುದು’ ಎಂದು ತಿಳಿಸಿದರು.</p>.<p>ವೈದ್ಯೆ ಎನ್.ಸುನೀತಾ, ‘ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ನಲ್ಲಿ ಶೇ 26ರಷ್ಟು ಸ್ತನ ಕ್ಯಾನ್ಸರ್ ಇರುತ್ತದೆ. ಅರಿವಿನ ಕೊರತೆ, ತಪಾಸಣೆಯ ಹಿಂಜರಿಕೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಾಗುತ್ತಿವೆ’ ಎಂದರು.</p>.<p>ಐಎಂಎ ಕಾರ್ಯದರ್ಶಿ ಡಾ.ಜಿ.ಮಹೇಶ್, ‘ಅಸೋಸಿಯೇಶನ್ ಆಫ್ ಸರ್ಜನ್ ಇಂಡಿಯಾ’ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಪ್ರಶಾಂತ್ ಬಿ.ನಿರ್ವಾಣಿರಾವ್, ಕಾರ್ಯದರ್ಶಿ ಡಾ.ಚೇತನ್, ಸರ್ಜಿಕಲ್ ಆಂಕಾಲಜಿ ಸಲಹೆಗಾರರಾದ ಡಾ.ಜಿ.ಗಿರೀಶ್, ಡಾ.ದರ್ಶನ್ ಪಾಟೀಲ್, ಡಾ.ಸಿ.ಎಚ್.ಪುಷ್ಪಾನಾಗ್, ಡಾ.ಮಂಜುನಾಥ್, ಡಾ.ಅನಿತಾ ಬಿ.ಗೌಡ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>