<p><strong>ಕೊರಟಗೆರೆ:</strong> ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.</p>.<p>ಒಟ್ಟು 15 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ 8 ಸದಸ್ಯರನ್ನು ಹೊಂದಿರುವ ಜೆಡಿಎಸ್ಗೆ ಸ್ಪಷ್ಟ ಬಹುಮತವಿದೆ. 5 ಕಾಂಗ್ರೆಸ್, ಒಬ್ಬರು ಬಿಜೆಪಿ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. 4ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ನರಸಿಂಹಪ್ಪ ಅವರ ನಿಧನ<br />ದಿಂದಾಗಿ ಸದ್ಯ ಕಾಂಗ್ರೆಸ್ನ ನಾಲ್ವರು ಸದಸ್ಯರಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ಮೂವರು ಮಹಿಳಾ ಆಕಾಂಕ್ಷಿಗಳಿದ್ದಾರೆ. ಕೆ.ವಿ. ಕಾವ್ಯ, ಮಂಜುಳಾ, ಜಿ.ಎನ್. ಭಾಗ್ಯಮ್ಮ ನಡುವೆ<br />ಪೈಪೋಟಿಯಿದೆ. ಮೂವರು ಆಕಾಂಕ್ಷಿಗಳ ಪತಿಯರು ಪಕ್ಷದ ಹಿರಿಯ ಮುಖಂಡರ ಮನ ಒಲಿಸಲು ಯತ್ನಿಸುತ್ತಿದ್ದಾರೆ. ಪಕ್ಷದ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನದಲ್ಲಿದ್ದಾರೆ.</p>.<p>ಮೂವರು ಆಕಾಂಕ್ಷಿಗಳ ನಡುವೆ ಒಪ್ಪಂದವಾಗಿ ಮೂವರು ನಿರ್ದಿಷ್ಟ ತಿಂಗಳಿಗೆ ಅಧಿಕಾರ ಹಂಚಿಕೊಳ್ಳಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.</p>.<p>ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಪ್ರತಿಯೊಬ್ಬರೂ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.</p>.<p>ಈ ಹಿಂದೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಆದರೆ ಸರ್ಕಾರ ಆ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆಗ ಜೆಡಿಎಸ್ಗೆ ಬಹುಮತ ಇದ್ದರೂ, ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿತ್ತು. ಈ ಬಗ್ಗೆ ಮಾತುಕತೆಯೂ ನಡೆದಿತ್ತು. ಆದರೆ ಈಗ ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು, ಕಾಂಗ್ರೆಸ್ಗೆ ಅಧಿಕಾರ ಕೈ ತಪ್ಪಿದೆ. ಸ್ಥಳೀಯ ಶಾಸಕ ಜಿ.ಪರಮೇಶ್ವರ ಅವರಿಗೆ ಮುಖಭಂಗ ಮಾಡುವ ಉದ್ದೇಶದಿಂದಲೇ ಮೀಸಲಾತಿಯನ್ನು ಎಸ್ಟಿ ಮಹಿಳೆಗೆ ಬದಲಾಯಿಸಲಾಗಿದೆ. ಈ ಬದಲಾವಣೆಯಲ್ಲಿ ಕೆ.ಎನ್. ರಾಜಣ್ಣ ಕೈವಾಡ ಇದೆ ಎಂಬ ವಿಶ್ಲೇಷಣೆಗಳೂ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡದ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.</p>.<p>ಒಟ್ಟು 15 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ 8 ಸದಸ್ಯರನ್ನು ಹೊಂದಿರುವ ಜೆಡಿಎಸ್ಗೆ ಸ್ಪಷ್ಟ ಬಹುಮತವಿದೆ. 5 ಕಾಂಗ್ರೆಸ್, ಒಬ್ಬರು ಬಿಜೆಪಿ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. 4ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ನರಸಿಂಹಪ್ಪ ಅವರ ನಿಧನ<br />ದಿಂದಾಗಿ ಸದ್ಯ ಕಾಂಗ್ರೆಸ್ನ ನಾಲ್ವರು ಸದಸ್ಯರಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡದ ಮೂವರು ಮಹಿಳಾ ಆಕಾಂಕ್ಷಿಗಳಿದ್ದಾರೆ. ಕೆ.ವಿ. ಕಾವ್ಯ, ಮಂಜುಳಾ, ಜಿ.ಎನ್. ಭಾಗ್ಯಮ್ಮ ನಡುವೆ<br />ಪೈಪೋಟಿಯಿದೆ. ಮೂವರು ಆಕಾಂಕ್ಷಿಗಳ ಪತಿಯರು ಪಕ್ಷದ ಹಿರಿಯ ಮುಖಂಡರ ಮನ ಒಲಿಸಲು ಯತ್ನಿಸುತ್ತಿದ್ದಾರೆ. ಪಕ್ಷದ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನದಲ್ಲಿದ್ದಾರೆ.</p>.<p>ಮೂವರು ಆಕಾಂಕ್ಷಿಗಳ ನಡುವೆ ಒಪ್ಪಂದವಾಗಿ ಮೂವರು ನಿರ್ದಿಷ್ಟ ತಿಂಗಳಿಗೆ ಅಧಿಕಾರ ಹಂಚಿಕೊಳ್ಳಬಹುದು ಎನ್ನುವ ಮಾತುಗಳು ಕೇಳಿ ಬರುತ್ತಿವೆ.</p>.<p>ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಪ್ರತಿಯೊಬ್ಬರೂ ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ.</p>.<p>ಈ ಹಿಂದೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು. ಆದರೆ ಸರ್ಕಾರ ಆ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಆಗ ಜೆಡಿಎಸ್ಗೆ ಬಹುಮತ ಇದ್ದರೂ, ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿತ್ತು. ಈ ಬಗ್ಗೆ ಮಾತುಕತೆಯೂ ನಡೆದಿತ್ತು. ಆದರೆ ಈಗ ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು, ಕಾಂಗ್ರೆಸ್ಗೆ ಅಧಿಕಾರ ಕೈ ತಪ್ಪಿದೆ. ಸ್ಥಳೀಯ ಶಾಸಕ ಜಿ.ಪರಮೇಶ್ವರ ಅವರಿಗೆ ಮುಖಭಂಗ ಮಾಡುವ ಉದ್ದೇಶದಿಂದಲೇ ಮೀಸಲಾತಿಯನ್ನು ಎಸ್ಟಿ ಮಹಿಳೆಗೆ ಬದಲಾಯಿಸಲಾಗಿದೆ. ಈ ಬದಲಾವಣೆಯಲ್ಲಿ ಕೆ.ಎನ್. ರಾಜಣ್ಣ ಕೈವಾಡ ಇದೆ ಎಂಬ ವಿಶ್ಲೇಷಣೆಗಳೂ ನಡೆದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>