<p><strong>ತುಮಕೂರು: </strong>ಕೆರೆಗಳಿಗೆ ನದಿ ನೀರು ಹರಿಸುವುದು ಮತ್ತು ಜಲಾಂದೋಲನದ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಜುಲೈ 6ರಂದು ಸಂಜೆ 6 ಗಂಟೆಗೆ ಸಿದ್ಧಗಂಗಾಮಠ ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಬಳಿ ಬಿಜೆಪಿ ಕರ್ನಾಟಕ ಅಭಿವೃದ್ಧಿ ಮಾಹಿತಿ ಪ್ರಕೋಷ್ಠ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.</p>.<p>ಜಲಾಂದೋಲನದ ಬೃಹತ್ ಸಮಾವೇಶವನ್ನು ತುಮಕೂರಿನಲ್ಲಿ ನಡೆಸುವ ಪ್ರಯುಕ್ತ ಪೂರ್ವಭಾವಿಯಾಗಿ ಧಾರ್ಮಿಕ ಮುಖಂಡರ, ಸಂಘ ಸಂಸ್ಥೆಗಳ ಪದಾಧಿಕಾರಿಗಳ, ವಿಷಯ ತಜ್ಞರ, ಪರಿಸರ ಆಸಕ್ತರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.</p>.<p>ಈ ಜಲಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ಭಾನುವಾರಜಿ.ಎಸ್. ಬಸವರಾಜು ಅವರು ವಿಧಾನಸಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.</p>.<p>ರಾಜ್ಯದಲ್ಲಿ ನೀರಿನ ಹಾಹಾಕಾರ ಹೋಗಲಾಡಿಸಲು ಕೆರೆಗಳನ್ನು ತುಂಬಿಸಬೇಕು. ರಾಜ್ಯದ 38,608 ಕೆರೆಗಳಿಗೆ ಮಳೆ ನೀರು ತುಂಬಿಸಬೇಕು. ನದಿಗಳಿಂದ ಕುಡಿಯಲು ನೀರು ತುಂಬಿಸಬೇಕು. ಮಲೆನಾಡು ಪ್ರದೇಶದಲ್ಲಿ ಕಿಂಡಿ ಯೋಜನೆ ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಿದರು.</p>.<p>ಈ ರೀತಿ ಮಾಡುವುದರಿಂದ ಅಂತರ್ಜಲ ಅಭಿವೃದ್ಧಿಯಾಗುತ್ತದೆ. ನೀರಿನ ಸಮಸ್ಯೆಯೂ ಪರಿಹಾರ ಕಾಣಲಿದೆ ಎಂದು ವಿವರಿಸಿದರು.</p>.<p>ಮುಖ್ಯಮಂತ್ರಿಗೆ ಈ ಕುರಿತು ಪತ್ರ ಬರೆಯಬೇಕು. ಕೇಂದ್ರ ಸರ್ಕಾರಕ್ಕೆ ಯೋಜನೆ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು. ಬಿಜೆಪಿಯಿಂದ ಕೆರೆಗಳಿಗೆ ನದಿ ನೀರು ತುಂಬಿಸುವ ಬೃಹತ್ ಆಂದೋಲನ ರೂಪಿಸಬೇಕು ಎಂದು ವಿವರಿಸಿದರು.</p>.<p>ಯಡಿಯೂರಪ್ಪ ಮಾತನಾಡಿ, ‘ ರಾಜ್ಯದ ಎಲ್ಲ ಭಾಗದಲ್ಲೂ ನೀರಿಗೆ ತೊಂದರೆಯಾಗಿದೆ. ಯಾವ ರೀತಿ ಪರಿಹಾರ ದೊರಕಿಸಬೇಕು ಎಂಬ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಪ್ರಧಾನಿ ಮತ್ತು ಜಲಶಕ್ತಿ ಸಚಿವರ ಬಳಿ ನಿಯೋಗದಲ್ಲಿ ತೆರಳಿ ಮನವರಿಕೆ ಮಾಡಿಕೊಡಲಾಗುವುದು’ ಎಂದು ಹೇಳಿದರು.</p>.<p>’ಲಿಂಗನಮಕ್ಕಿಯಲ್ಲಿ 150 ಟಿಎಂಸಿ ನೀರು ಸಂಗ್ರಹ ಮಾಡಬಹುದಾಗಿದೆ. ಆಘನಾಶಿನಿ, ಭೇಡ್ತಿ, ವರದಾ ನೀರನ್ನು ಲಿಂಗನಮಕ್ಕಿಗೆ ತರಬಹುದು. ಪರಿಸರಕ್ಕೆ ಧಕ್ಕೆ ಆಗದ ರೀತಿ ನೀರನ್ನು ತರಲು ಆ ಭಾಗದ ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸಂಸದ ನಿಯೋಗದಲ್ಲಿದ್ದ ಅಭಿವೃದ್ಧಿ ರೆವಲ್ಯೂಷನ್ ಫೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕೆರೆಗಳಿಗೆ ನದಿ ನೀರು ಹರಿಸುವುದು ಮತ್ತು ಜಲಾಂದೋಲನದ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ಜುಲೈ 6ರಂದು ಸಂಜೆ 6 ಗಂಟೆಗೆ ಸಿದ್ಧಗಂಗಾಮಠ ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ಬಳಿ ಬಿಜೆಪಿ ಕರ್ನಾಟಕ ಅಭಿವೃದ್ಧಿ ಮಾಹಿತಿ ಪ್ರಕೋಷ್ಠ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ.</p>.<p>ಜಲಾಂದೋಲನದ ಬೃಹತ್ ಸಮಾವೇಶವನ್ನು ತುಮಕೂರಿನಲ್ಲಿ ನಡೆಸುವ ಪ್ರಯುಕ್ತ ಪೂರ್ವಭಾವಿಯಾಗಿ ಧಾರ್ಮಿಕ ಮುಖಂಡರ, ಸಂಘ ಸಂಸ್ಥೆಗಳ ಪದಾಧಿಕಾರಿಗಳ, ವಿಷಯ ತಜ್ಞರ, ಪರಿಸರ ಆಸಕ್ತರೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.</p>.<p>ಈ ಜಲಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ಭಾನುವಾರಜಿ.ಎಸ್. ಬಸವರಾಜು ಅವರು ವಿಧಾನಸಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.</p>.<p>ರಾಜ್ಯದಲ್ಲಿ ನೀರಿನ ಹಾಹಾಕಾರ ಹೋಗಲಾಡಿಸಲು ಕೆರೆಗಳನ್ನು ತುಂಬಿಸಬೇಕು. ರಾಜ್ಯದ 38,608 ಕೆರೆಗಳಿಗೆ ಮಳೆ ನೀರು ತುಂಬಿಸಬೇಕು. ನದಿಗಳಿಂದ ಕುಡಿಯಲು ನೀರು ತುಂಬಿಸಬೇಕು. ಮಲೆನಾಡು ಪ್ರದೇಶದಲ್ಲಿ ಕಿಂಡಿ ಯೋಜನೆ ರೂಪಿಸುವ ಬಗ್ಗೆ ಸಮಾಲೋಚನೆ ನಡೆಸಿದರು.</p>.<p>ಈ ರೀತಿ ಮಾಡುವುದರಿಂದ ಅಂತರ್ಜಲ ಅಭಿವೃದ್ಧಿಯಾಗುತ್ತದೆ. ನೀರಿನ ಸಮಸ್ಯೆಯೂ ಪರಿಹಾರ ಕಾಣಲಿದೆ ಎಂದು ವಿವರಿಸಿದರು.</p>.<p>ಮುಖ್ಯಮಂತ್ರಿಗೆ ಈ ಕುರಿತು ಪತ್ರ ಬರೆಯಬೇಕು. ಕೇಂದ್ರ ಸರ್ಕಾರಕ್ಕೆ ಯೋಜನೆ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು. ಬಿಜೆಪಿಯಿಂದ ಕೆರೆಗಳಿಗೆ ನದಿ ನೀರು ತುಂಬಿಸುವ ಬೃಹತ್ ಆಂದೋಲನ ರೂಪಿಸಬೇಕು ಎಂದು ವಿವರಿಸಿದರು.</p>.<p>ಯಡಿಯೂರಪ್ಪ ಮಾತನಾಡಿ, ‘ ರಾಜ್ಯದ ಎಲ್ಲ ಭಾಗದಲ್ಲೂ ನೀರಿಗೆ ತೊಂದರೆಯಾಗಿದೆ. ಯಾವ ರೀತಿ ಪರಿಹಾರ ದೊರಕಿಸಬೇಕು ಎಂಬ ಬಗ್ಗೆ ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತೇನೆ. ಪ್ರಧಾನಿ ಮತ್ತು ಜಲಶಕ್ತಿ ಸಚಿವರ ಬಳಿ ನಿಯೋಗದಲ್ಲಿ ತೆರಳಿ ಮನವರಿಕೆ ಮಾಡಿಕೊಡಲಾಗುವುದು’ ಎಂದು ಹೇಳಿದರು.</p>.<p>’ಲಿಂಗನಮಕ್ಕಿಯಲ್ಲಿ 150 ಟಿಎಂಸಿ ನೀರು ಸಂಗ್ರಹ ಮಾಡಬಹುದಾಗಿದೆ. ಆಘನಾಶಿನಿ, ಭೇಡ್ತಿ, ವರದಾ ನೀರನ್ನು ಲಿಂಗನಮಕ್ಕಿಗೆ ತರಬಹುದು. ಪರಿಸರಕ್ಕೆ ಧಕ್ಕೆ ಆಗದ ರೀತಿ ನೀರನ್ನು ತರಲು ಆ ಭಾಗದ ಜನರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸಂಸದ ನಿಯೋಗದಲ್ಲಿದ್ದ ಅಭಿವೃದ್ಧಿ ರೆವಲ್ಯೂಷನ್ ಫೋರಂ ಅಧ್ಯಕ್ಷ ಕುಂದರನಹಳ್ಳಿ ರಮೇಶ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>