ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾ: ಅಪಘಾತದಲ್ಲಿ ಇಬ್ಬರು ಸಾವು

Published 25 ಏಪ್ರಿಲ್ 2024, 5:58 IST
Last Updated 25 ಏಪ್ರಿಲ್ 2024, 5:58 IST
ಅಕ್ಷರ ಗಾತ್ರ

ಶಿರಾ: ತಾಲ್ಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆ ಅಥಣಿ ಮೂಲದ ಉಮೇಶ್ ನಾಗಪ್ಪ (35) ಹಾಗೂ ಸಂತೋಷ್ ಸುರೇಶ್ (40) ಮೃತಪಟ್ಟಿದ್ದಾರೆ.

ಬೊಲೆರೋ ವಾಹನದಲ್ಲಿ ದ್ರಾಕ್ಷಿ ತುಂಬಿಕೊಂಡು ಬೆಂಗಳೂರಿಗೆ ಹೋಗುತ್ತಿದ್ದ ಸಮಯದಲ್ಲಿ ಚಿಕ್ಕನಹಳ್ಳಿ ಸಮೀಪ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೊಲೆರೋದಲ್ಲಿದ್ದ ಉಮೇಶ್ ನಾಗಪ್ಪ ಹಾಗೂ ಸಂತೋಷ್ ಸುರೇಶ್ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಚಾಲಕನಿಗೆ ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT