ಪ್ರವೀಣ್ ಟಿಪ್ಪು ನಗರದ ನಿವಾಸಿ. ಪೇಟಿಂಗ್ ಕೆಲಸ ಮಾಡಿಕೊಂಡಿದ್ದರು. ಕಾಲ್ಟ್ಯಾಕ್ಸ್ ವೃತ್ತದ ಬಳಿ ರಸ್ತೆ ದಾಟುತ್ತಿರುವಾಗ ನಗರದಿಂದ ಕುಣಿಗಲ್ ಕಡೆಗೆ ಹೋಗುತ್ತಿದ್ದ ವಾಹನ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಪ್ರವೀಣ್ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾಗೆ ಕಳುಹಿಸಲಾಗಿತ್ತು. ವಿಕ್ಟೋರಿಯಾದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.