<p>ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಗೃಹ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿನ್ನಲೆಯಲ್ಲಿ ತಾಲ್ಲೂಕಿನಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.</p>.<p>ಮುಖ್ಯ ರಸ್ತೆಗಳ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರು ಸರ್ಪಗಾವಲು ಇತ್ತು. ತಾಲ್ಲೂಕಿನ ಗಡಿ ಕಳ್ಳಿಪಾಳ್ಯದ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿದ್ದ ಪೊಲೀಸರು ಕಟ್ಟುನಿಟ್ಟಿನ ವಿಚಾರಣೆ ನಂತರ ಪ್ರಯಾಣಿಕರನ್ನು ಮುಂದೆ ಕಳುಹಿಸುತ್ತಿದ್ದರು.</p>.<p>ಪಟ್ಟಣದ ಹೆದ್ದಾರಿಯಲ್ಲಿ ಗುಂಪು ಸೇರಿದ ಪ್ರತಿಭಟನಕಾರರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.</p>.<p>ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಕಾಲುವೆ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಎಕ್ಸ್ಪ್ರೆಸ್ ಕಾಲುವೆ ನಿರ್ಮಾಣವಾದಲ್ಲಿ ಜಿಲ್ಲೆಗೆ ಅದರಲ್ಲಿಯೂ ವಿಶೇಷವಾಗಿ ತಾಲ್ಲೂಕಿಗೆ ಅನ್ಯಾಯವಾಗುವುದರಿಂದ ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಲು ಬಿಡುವುದಿಲ್ಲ. ಮಾಗಡಿಗೆ ನಿಗದಿಗೊಳಿಸಿರುವ ನೀರನ್ನು ಪ್ರಸ್ತುತ ಇರುವ ಹೇಮಾವತಿ ಕಾಲುವೆಯಲ್ಲಿಯೇ ತೆಗೆದುಕೊಂಡು ಹೋಗಲು ಅಭ್ಯಂತರ ಇಲ್ಲ ಎಂದು ಮುಖಂಡ ಶಂಕರ್ ಕುಮಾರ್ ಹೇಳಿದರು.</p>.<p>ಗ್ರಾಮೀಣ ಭಾಗದಲ್ಲಿಯೂ ಪೊಲೀಸರನ್ನು ನಿಯೋಜಿಸುವ ಮೂಲಕ ಸರ್ಕಾರ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಖಂಡನೀಯ. ಯಾವುದೇ ಕಾರಣಕ್ಕೂ ರೈತ ಸಂಘವು ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ ಗೃಹ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿನ್ನಲೆಯಲ್ಲಿ ತಾಲ್ಲೂಕಿನಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.</p>.<p>ಮುಖ್ಯ ರಸ್ತೆಗಳ ಆಯಕಟ್ಟಿನ ಜಾಗಗಳಲ್ಲಿ ಪೊಲೀಸರು ಸರ್ಪಗಾವಲು ಇತ್ತು. ತಾಲ್ಲೂಕಿನ ಗಡಿ ಕಳ್ಳಿಪಾಳ್ಯದ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿದ್ದ ಪೊಲೀಸರು ಕಟ್ಟುನಿಟ್ಟಿನ ವಿಚಾರಣೆ ನಂತರ ಪ್ರಯಾಣಿಕರನ್ನು ಮುಂದೆ ಕಳುಹಿಸುತ್ತಿದ್ದರು.</p>.<p>ಪಟ್ಟಣದ ಹೆದ್ದಾರಿಯಲ್ಲಿ ಗುಂಪು ಸೇರಿದ ಪ್ರತಿಭಟನಕಾರರು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.</p>.<p>ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವ ಕಾಲುವೆ ಕಾಮಗಾರಿಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.</p>.<p>ಎಕ್ಸ್ಪ್ರೆಸ್ ಕಾಲುವೆ ನಿರ್ಮಾಣವಾದಲ್ಲಿ ಜಿಲ್ಲೆಗೆ ಅದರಲ್ಲಿಯೂ ವಿಶೇಷವಾಗಿ ತಾಲ್ಲೂಕಿಗೆ ಅನ್ಯಾಯವಾಗುವುದರಿಂದ ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಲು ಬಿಡುವುದಿಲ್ಲ. ಮಾಗಡಿಗೆ ನಿಗದಿಗೊಳಿಸಿರುವ ನೀರನ್ನು ಪ್ರಸ್ತುತ ಇರುವ ಹೇಮಾವತಿ ಕಾಲುವೆಯಲ್ಲಿಯೇ ತೆಗೆದುಕೊಂಡು ಹೋಗಲು ಅಭ್ಯಂತರ ಇಲ್ಲ ಎಂದು ಮುಖಂಡ ಶಂಕರ್ ಕುಮಾರ್ ಹೇಳಿದರು.</p>.<p>ಗ್ರಾಮೀಣ ಭಾಗದಲ್ಲಿಯೂ ಪೊಲೀಸರನ್ನು ನಿಯೋಜಿಸುವ ಮೂಲಕ ಸರ್ಕಾರ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಖಂಡನೀಯ. ಯಾವುದೇ ಕಾರಣಕ್ಕೂ ರೈತ ಸಂಘವು ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.<br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>