ತುಮಕೂರು: ತುಮಕೂರು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಲತಾ ರವಿಕುಮಾರ್ ಅವರ ಮನೆಯಲ್ಲಿ ಕಳ್ಳತನ ಆಗಿರುವು ಭಾನುವಾರ ರಾತ್ರಿ ಬೆಳಕಿಗೆ ಬಂದಿದೆ.
ಶಿವರಾತ್ರಿ ಹಬ್ಬದ ಪ್ರಯುಕ್ತ ಲತಾ ಅವರು ತಮ್ಮ ಊರಾದ ಕಲ್ಲಕೆರೆಗೆ ಹೋಗಿದ್ದರು. ಈ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ಹಾಗೂ ಒಂದೂವರೆ ಲಕ್ಷ ಕಳ್ಳತನ ಆಗಿದೆ ಎಂದು ಹೇಳಲಾಗುತ್ತಿದೆ. ಕಳುವಾಗಿರುವ ಹಣ, ಆಭರಣದ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸುತ್ತಿದ್ದಾರೆ.
ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮನೆ ಬಂದು ವಸ್ತುಗಳ ಮೇಲಿನ ಬೆರಳಚ್ಚು ಸಂಗ್ರಹಿಸುತ್ತಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಡಿವೈಎಸ್ಪಿ ತಿಪ್ಪೇಸ್ವಾಮಿ ಭೇಟಿ ನೀಡಿ, ಪರಿಶೀಲಿಸಿದರು.