‘ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಸ್ಥಳ ಅತ್ಯಂತ ಅಪಾಯಕಾರಿಯಾಗಿದ್ದು, ಅಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ಭದ್ರತೆ ಒದಗಿಸಿಲ್ಲ. ಇಂತಹ ಜಾಗದಲ್ಲಿ ಕಲ್ಲುಗಣಿಗಾರಿಕೆಗೆ ಹೇಗೆ ಪರವಾನಗಿ ನೀಡಿದರು ಎಂಬುದು ಪ್ರಶ್ನೆಯಾಗಿದೆ. ಕಲ್ಲು ಸ್ಫೋಟಕ ಬಳಸಲು ಪರವಾನಗಿ ಪಡೆದಿದ್ದಾರೆಯೇ? ಇಲ್ಲವೇ ಎಂಬುದನ್ನು ಪರಿಶೀಲಿಸಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಸಿಪಿಐ ಎಫ್.ಕೆ.ನದಾಫ್ ತಿಳಿಸಿದರು.