<p><strong>ಕುಣಿಗಲ್</strong>: ತಾಲ್ಲೂಕಿನ ಹುತ್ರಿಬೆಟ್ಟದ ಪುರಾತತ್ವ ಇಲಾಖೆ ಸಂರಕ್ಷಿತ ಪ್ರದೇಶದ ಬಳಿ ಕಿಡಿಗೇಡಿಗಳು ಬಂಡೆಗಳನ್ನು ಸ್ಫೋಟಿಸಿದ್ದು, ಹುತ್ರಿದುರ್ಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲೇಶ್ ಕುಣಿಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಹುತ್ರಿಬೆಟ್ಟದಲ್ಲಿ ಪುರಾತತ್ವ ಇಲಾಖೆಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕೋಟೆ ಹೆಬ್ಬಾಗಿಲು ದುರಸ್ತಿಯೂ ನಡೆಯುತ್ತಿದೆ. ಕೋಟೆ ಹೆಬ್ಬಾಗಿಲಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಿಡಿಗೇಡಿಗಳು ಅಕ್ರಮವಾಗಿ ಸ್ಫೋಟಕ ಸಾಮಗ್ರಿ ಬಳಸಿ ಬಂಡೆಗಳನ್ನು ಸ್ಫೋಟಿಸಿದ್ದಾರೆ. ಇದರಿಂದಾಗಿ ಕೋಟೆಗೆ ಧಕ್ಕೆಯಾಗಲಿದೆ ಎಂದಿದ್ದಾರೆ.</p>.<p>ಒಂದೆಡೆ ಜನಪ್ರತಿನಿಧಿಗಳು, ತಾಲ್ಲೂಕು ಆಡಳಿತ ಇತಿಹಾಸ ಪ್ರಸಿದ್ಧ ಕೆಂಪೇಗೌಡರಿಂದ ನಿರ್ಮಾಣಗೊಂಡಿರುವ ಹುತ್ರಿಬೆಟ್ಟ ಸಂರಕ್ಷಣೆ, ಅಭಿವೃದ್ಧಿತೆ ಶ್ರಮಿಸುತ್ತಿರುವ ಸಮಯದಲ್ಲಿ ಕಿಡಿಗೇಡಿಗಳು ಬೆಟ್ಟದ ಕೋಟೆಗೆ ಧಕ್ಕೆ ತರಲು ಹೊರಟಿರುವುದು ಸರಿಯಲ್ಲ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನ ಹುತ್ರಿಬೆಟ್ಟದ ಪುರಾತತ್ವ ಇಲಾಖೆ ಸಂರಕ್ಷಿತ ಪ್ರದೇಶದ ಬಳಿ ಕಿಡಿಗೇಡಿಗಳು ಬಂಡೆಗಳನ್ನು ಸ್ಫೋಟಿಸಿದ್ದು, ಹುತ್ರಿದುರ್ಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲೇಶ್ ಕುಣಿಗಲ್ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಹುತ್ರಿಬೆಟ್ಟದಲ್ಲಿ ಪುರಾತತ್ವ ಇಲಾಖೆಯಿಂದ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಕೋಟೆ ಹೆಬ್ಬಾಗಿಲು ದುರಸ್ತಿಯೂ ನಡೆಯುತ್ತಿದೆ. ಕೋಟೆ ಹೆಬ್ಬಾಗಿಲಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಕಿಡಿಗೇಡಿಗಳು ಅಕ್ರಮವಾಗಿ ಸ್ಫೋಟಕ ಸಾಮಗ್ರಿ ಬಳಸಿ ಬಂಡೆಗಳನ್ನು ಸ್ಫೋಟಿಸಿದ್ದಾರೆ. ಇದರಿಂದಾಗಿ ಕೋಟೆಗೆ ಧಕ್ಕೆಯಾಗಲಿದೆ ಎಂದಿದ್ದಾರೆ.</p>.<p>ಒಂದೆಡೆ ಜನಪ್ರತಿನಿಧಿಗಳು, ತಾಲ್ಲೂಕು ಆಡಳಿತ ಇತಿಹಾಸ ಪ್ರಸಿದ್ಧ ಕೆಂಪೇಗೌಡರಿಂದ ನಿರ್ಮಾಣಗೊಂಡಿರುವ ಹುತ್ರಿಬೆಟ್ಟ ಸಂರಕ್ಷಣೆ, ಅಭಿವೃದ್ಧಿತೆ ಶ್ರಮಿಸುತ್ತಿರುವ ಸಮಯದಲ್ಲಿ ಕಿಡಿಗೇಡಿಗಳು ಬೆಟ್ಟದ ಕೋಟೆಗೆ ಧಕ್ಕೆ ತರಲು ಹೊರಟಿರುವುದು ಸರಿಯಲ್ಲ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>