ರೋಹಿತ್ ನೇತೃತ್ವದ ತಂಡ ಇತ್ತೀಚೆಗೆ ವಾಲ್ಮೀಕಿನಗರದ 6ನೇ ಕ್ರಾಸ್ನ ವಿಶ್ವೇಶ್ವರ ಆರಾಧ್ಯ ಅವರ ಮನೆಗೆ ನುಗ್ಗಿ ಬೆದರಿಕೆ ಹಾಕಿ ₹ 5.87 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳು, ₹ 72 ಸಾವಿರ ನಗದು ಮತ್ತು ಎರಡು ಮೊಬೈಲ್ ದೋಚಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಹೊಸ ಬಡಾವಣೆ ಪೊಲೀಸರು ಬಂಧಿಸಿದ್ದರು. ರೋಹಿತ್ ತಲೆಮರೆಸಿಕೊಂಡಿದ್ದ. ಆರೋಪಿ ಮಾರನಾಯಕನಪಾಳ್ಯದ ಬಳಿದ ಬಳಿ ಇರುವುದನ್ನು ಖಚಿತಪಡಿಸಿಕೊಂಡತಿಲಕ್ ಪಾರ್ಕ್ ಠಾಣೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದರು.