ಪಾವಗಡ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಬುಧವಾರ (ಡಿ18) ತಾಲ್ಲೂಕಿನ ಸಿ.ಕೆ.ಪುರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಗ್ರಾಮದ ಆನಂದರಾವ್ ಎಂಬುವವರ ಮನೆಯಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಸಂಜೆ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ನಡೆಯುವ ಗ್ರಾಮ ವಿಕಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಭಾಗವತ್ ಭೇಟಿ ಹಿನ್ನೆಲೆಯಲ್ಲಿ ಪಾವಗಡದಿಂದ ಸಿ.ಕೆ.ಪುರಕ್ಕೆ ಹೋಗುವ ಮಾರ್ಗ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.