<p><strong>ತುರುವೇಕೆರೆ:</strong> ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಪಟ್ಟಣದಲ್ಲಿ ಗಣವೇಷಧಾರಿಗಳ ಪಥಸಂಚಲನ ನೆಡೆಯಿತು.</p>.<p>ಪಟ್ಟಣದ ಉಡಸಲಮ್ಮ ದೇವಾಲಯದ ಆವರಣದಲ್ಲಿ ಜಮಾವಣೆಗೊಂಡ ತಾಲ್ಲೂಕಿನ ಸಾವಿರಾರು ಗಣವೇಷಧಾರಿಗಳು ಭಾರತಾಂಬೆ ಫೋಟೊಗೆ ಪೂಜೆ. ಧ್ವಜವಂದನೆ ಸಲ್ಲಿಸಿದರು. ನಂತರ ಪಥಸಂಚಲನ ಆರಂಭಿಸಿದರು.</p>.<p>ಮಕ್ಕಳು, ಯುವಕರು ಸೇರಿ ಹಲವು ಜನರು ಸ್ವಯಂಪ್ರೇರಿತರಾಗಿ ಗಣ ವೇಷಧಾರಿಗಳಾಗಿ ಭಾಗವಹಿಸಿದ್ದರು. ಬೆಳಿಗ್ಗೆ 11.30ಕ್ಕೆ ಆರಂಭಗೊಂಡ ಪಥಸಂಚಲನ ಸಂತೆ ಮೈದಾನದಿಂದ ಬಾಣಸಂದ್ರ ರಸ್ತೆ, ಎಸ್.ಬಿ.ಎಂ ಬ್ಯಾಂಕ್ ರಸ್ತೆ, ತಿಪಟೂರು ರಸ್ತೆ ಮೂಲಕ ಸಾಗಿ ಉಡಸಲಮ್ಮದೇವಿ ಆವರಣದಲ್ಲಿ ಮುಕ್ತಾಯವಾಯಿತು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗಣವೇಷಧಾರಿಗಳು ಪಥಸಂಚಲನ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಸಿಬಿ ಮೂಲಕ ಹೂ ಮಳೆ ಸುರಿಸಲಾಯಿತು. ಪಟ್ಟಣದ ಜನರು ತಮ್ಮ ಮನೆ ಅಂಗಡಿ ಮುಂಭಾಗ ಸಾಗುವಾಗ ಪುಷ್ಪದಿಂದ ಸ್ವಾಗತಿಸಿದರು.</p>.<p>ಗಣವೇಷಧಾರಿಗಳಾಗಿ ರಾಜ್ಯಸಭಾ ಸದಸ್ಯ ಜಗ್ಗೇಶ್, ಮಾಜಿ ಶಾಸಕ ಮಸಾಲ ಜಯರಾಂ, ಎಂ.ಡಿ.ಲಕ್ಷ್ಮೀನಾರಾಯಣ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಪಟ್ಟಣದಲ್ಲಿ ಗಣವೇಷಧಾರಿಗಳ ಪಥಸಂಚಲನ ನೆಡೆಯಿತು.</p>.<p>ಪಟ್ಟಣದ ಉಡಸಲಮ್ಮ ದೇವಾಲಯದ ಆವರಣದಲ್ಲಿ ಜಮಾವಣೆಗೊಂಡ ತಾಲ್ಲೂಕಿನ ಸಾವಿರಾರು ಗಣವೇಷಧಾರಿಗಳು ಭಾರತಾಂಬೆ ಫೋಟೊಗೆ ಪೂಜೆ. ಧ್ವಜವಂದನೆ ಸಲ್ಲಿಸಿದರು. ನಂತರ ಪಥಸಂಚಲನ ಆರಂಭಿಸಿದರು.</p>.<p>ಮಕ್ಕಳು, ಯುವಕರು ಸೇರಿ ಹಲವು ಜನರು ಸ್ವಯಂಪ್ರೇರಿತರಾಗಿ ಗಣ ವೇಷಧಾರಿಗಳಾಗಿ ಭಾಗವಹಿಸಿದ್ದರು. ಬೆಳಿಗ್ಗೆ 11.30ಕ್ಕೆ ಆರಂಭಗೊಂಡ ಪಥಸಂಚಲನ ಸಂತೆ ಮೈದಾನದಿಂದ ಬಾಣಸಂದ್ರ ರಸ್ತೆ, ಎಸ್.ಬಿ.ಎಂ ಬ್ಯಾಂಕ್ ರಸ್ತೆ, ತಿಪಟೂರು ರಸ್ತೆ ಮೂಲಕ ಸಾಗಿ ಉಡಸಲಮ್ಮದೇವಿ ಆವರಣದಲ್ಲಿ ಮುಕ್ತಾಯವಾಯಿತು.</p>.<p>ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗಣವೇಷಧಾರಿಗಳು ಪಥಸಂಚಲನ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಸಿಬಿ ಮೂಲಕ ಹೂ ಮಳೆ ಸುರಿಸಲಾಯಿತು. ಪಟ್ಟಣದ ಜನರು ತಮ್ಮ ಮನೆ ಅಂಗಡಿ ಮುಂಭಾಗ ಸಾಗುವಾಗ ಪುಷ್ಪದಿಂದ ಸ್ವಾಗತಿಸಿದರು.</p>.<p>ಗಣವೇಷಧಾರಿಗಳಾಗಿ ರಾಜ್ಯಸಭಾ ಸದಸ್ಯ ಜಗ್ಗೇಶ್, ಮಾಜಿ ಶಾಸಕ ಮಸಾಲ ಜಯರಾಂ, ಎಂ.ಡಿ.ಲಕ್ಷ್ಮೀನಾರಾಯಣ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>