<p><strong>ತುಮಕೂರು:</strong> ಗ್ರಾಮದ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬೆಳ್ಳಾವಿ ಸಮೀಪದ ಮಾವಿನಕುಂಟೆ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಶಾಸಕ ಡಿ.ಸಿ.ಗೌರಿಶಂಕರ್ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಸ್ಥರಿಗೆ ಧೈರ್ಯ ತುಂಬಿದರು. 80ಕ್ಕೂ ಹೆಚ್ಚು ಮನೆಗಳಿಗೆ 20 ಕೆ.ಜಿ ದಿನಸಿ ಪದಾರ್ಥಗಳ ಕಿಟ್ ಮತ್ತು ತರಕಾರಿ, ಸ್ಯಾನಿಟೈಸರ್, ಮಾಸ್ಕ್ಗಳನ್ನು ವಿತರಿಸಿದರು.</p>.<p>ಸೋಂಕು ತಗುಲಿರುವ ವ್ಯಕ್ತಿ ಬಗ್ಗೆ ಪೂರ್ಣ ಮಾಹಿತಿ ಕಲೆಹಾಕಿ. ಕ್ವಾರಂಟೈನ್ ಮಾಡಿರುವವರನ್ನು ಒಂದೇ ಕೊಠಡಿಯಲ್ಲಿ ಕೂಡಿ ಹಾಕದೆ ಬೇರೆ ಬೇರೆ ದೊಡ್ಡ ಕೊಠಡಿಗಳಲ್ಲಿ ಕ್ವಾರಂಟೈನ್ ಮಾಡಬೇಕು. ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.</p>.<p>ಗ್ರಾಮದಲ್ಲಿ ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ರೋಗ ನಿವಾರಕ ಔಷಧಿ ಸಿಂಪಡಿಸಬೇಕು. ಕೊರೊನಾ ಯಾರಿಗೆ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಕ್ವಾರಂಟೈನ್ನಲ್ಲಿರುವ ಬಗ್ಗೆ ಪ್ರೀತಿ, ವಿಶ್ವಾಸ ತೋರಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಗ್ರಾಮದ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬೆಳ್ಳಾವಿ ಸಮೀಪದ ಮಾವಿನಕುಂಟೆ ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಶಾಸಕ ಡಿ.ಸಿ.ಗೌರಿಶಂಕರ್ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಸ್ಥರಿಗೆ ಧೈರ್ಯ ತುಂಬಿದರು. 80ಕ್ಕೂ ಹೆಚ್ಚು ಮನೆಗಳಿಗೆ 20 ಕೆ.ಜಿ ದಿನಸಿ ಪದಾರ್ಥಗಳ ಕಿಟ್ ಮತ್ತು ತರಕಾರಿ, ಸ್ಯಾನಿಟೈಸರ್, ಮಾಸ್ಕ್ಗಳನ್ನು ವಿತರಿಸಿದರು.</p>.<p>ಸೋಂಕು ತಗುಲಿರುವ ವ್ಯಕ್ತಿ ಬಗ್ಗೆ ಪೂರ್ಣ ಮಾಹಿತಿ ಕಲೆಹಾಕಿ. ಕ್ವಾರಂಟೈನ್ ಮಾಡಿರುವವರನ್ನು ಒಂದೇ ಕೊಠಡಿಯಲ್ಲಿ ಕೂಡಿ ಹಾಕದೆ ಬೇರೆ ಬೇರೆ ದೊಡ್ಡ ಕೊಠಡಿಗಳಲ್ಲಿ ಕ್ವಾರಂಟೈನ್ ಮಾಡಬೇಕು. ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ಮಾಡಿದರು.</p>.<p>ಗ್ರಾಮದಲ್ಲಿ ಬೆಳಿಗ್ಗೆ ಮತ್ತು ಸಂಜೆ ಎರಡು ಬಾರಿ ರೋಗ ನಿವಾರಕ ಔಷಧಿ ಸಿಂಪಡಿಸಬೇಕು. ಕೊರೊನಾ ಯಾರಿಗೆ ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಕ್ವಾರಂಟೈನ್ನಲ್ಲಿರುವ ಬಗ್ಗೆ ಪ್ರೀತಿ, ವಿಶ್ವಾಸ ತೋರಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>