<p><strong>ತುಮಕೂರು</strong>: ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ನಿಗದಿ ಆಗಿರುವ ಹೇಮಾವತಿ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಒತ್ತಾಯಿಸುವೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.</p>.<p>ತಾಲ್ಲೂಕಿನ ನಾಗವಲ್ಲಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ಗ್ರಾಮಾಂತರ ಕ್ಷೇತ್ರಕ್ಕೆ ಹಂಚಿಕೆ ಆಗಿರುವ ಹೇಮಾವತಿ ನೀರು ಹರಿಸಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದೆ. ಹೇಮಾವತಿ ಜಲಾಶಯ ತುಂಬುವ ಹಂತದಲ್ಲಿ ಇದೆ. ಆದ್ದರಿಂದ ಈ ಬಾರಿ ಎಲ್ಲ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.</p>.<p>ನಾಗವಲ್ಲಿ ಮತ್ತು ಹೊನ್ನುಡಿಕೆ ಕೆರೆಗಳಿಗೆ ನೀರು ಹರಿಸುವ ಮೂಲಕ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸೋಮವಾರ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಒತ್ತಾಯಿಸುವೆ ಎಂದರು.</p>.<p>ನಾಗವಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಸೇರುತ್ತಿರುವುದು ಸಂತಸದ ವಿಚಾರ. ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ಜೆಡಿಎಸ್ ಮುಖಂಡ ಹಾಲನೂರು ಅನಂತಕುಮಾರ್, ತಾ.ಪಂ ಸದಸ್ಯ ದೀಪು, ರಾಮಣ್ಣ, ರಾಜು, ಗ್ರಾ.ಪಂ ಸದಸ್ಯ ವಿಜಯ್, ಸುರೇಶ್, ಸ್ವಾಮಿ, ಕೃಷ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ನಿಗದಿ ಆಗಿರುವ ಹೇಮಾವತಿ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರನ್ನು ಒತ್ತಾಯಿಸುವೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.</p>.<p>ತಾಲ್ಲೂಕಿನ ನಾಗವಲ್ಲಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ವರ್ಷ ಗ್ರಾಮಾಂತರ ಕ್ಷೇತ್ರಕ್ಕೆ ಹಂಚಿಕೆ ಆಗಿರುವ ಹೇಮಾವತಿ ನೀರು ಹರಿಸಲಿಲ್ಲ. ಈ ಬಾರಿ ಉತ್ತಮ ಮಳೆಯಾಗಿದೆ. ಹೇಮಾವತಿ ಜಲಾಶಯ ತುಂಬುವ ಹಂತದಲ್ಲಿ ಇದೆ. ಆದ್ದರಿಂದ ಈ ಬಾರಿ ಎಲ್ಲ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.</p>.<p>ನಾಗವಲ್ಲಿ ಮತ್ತು ಹೊನ್ನುಡಿಕೆ ಕೆರೆಗಳಿಗೆ ನೀರು ಹರಿಸುವ ಮೂಲಕ ಇಷ್ಟು ವರ್ಷಗಳ ಕಾಲ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸೋಮವಾರ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಒತ್ತಾಯಿಸುವೆ ಎಂದರು.</p>.<p>ನಾಗವಲ್ಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಸೇರುತ್ತಿರುವುದು ಸಂತಸದ ವಿಚಾರ. ಈ ಭಾಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರ್ಯಕರ್ತರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.</p>.<p>ಜೆಡಿಎಸ್ ಮುಖಂಡ ಹಾಲನೂರು ಅನಂತಕುಮಾರ್, ತಾ.ಪಂ ಸದಸ್ಯ ದೀಪು, ರಾಮಣ್ಣ, ರಾಜು, ಗ್ರಾ.ಪಂ ಸದಸ್ಯ ವಿಜಯ್, ಸುರೇಶ್, ಸ್ವಾಮಿ, ಕೃಷ್ಣಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>