ಈ ಸಂಬಂಧ ರಮೇಶ್ಗೌಡ ಎಂಬುವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, 2015ರಲ್ಲಿ ಸುರೇಶ್ಗೌಡ, ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುವ ಸಮಯದಲ್ಲಿ ಶ್ರೀನಿವಾಸ್ ಹೆಸರು ಕೈಬಿಟ್ಟು, ಸುರೇಶ್ಗೌಡ ವಿರುದ್ಧ ಆರೋಪ ಹೊರಿಸಲಾಗಿತ್ತು. ವಿಚಾರಣೆ ಸಮಯದಲ್ಲಿ ಆರೋಪ ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಆರೋಪ ಮುಕ್ತಗೊಳಿಸಲಾಗಿದೆ ಎಂದು ಸುರೇಶ್ಗೌಡ ಪರ ವಕೀಲರಾದ ನಳಿನಾ ಮಾಯಗೌಡ ತಿಳಿಸಿದರು.