<p><strong>ತುಮಕೂರು: </strong>ಬಿ.ಎಚ್.ರಸ್ತೆಯಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ಬಟವಾಡಿ ಬಳಿಯ 35ನೇ ವಾರ್ಡ್ನ ಸಾಬರ ಪಾಳ್ಯದಲ್ಲಿ ರಸ್ತೆಗೆ ಅಡ್ಡಲಾಗಿದ್ದ ಮನೆಗಳನ್ನು ಶುಕ್ರವಾರ ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.</p>.<p>ಕಳೆದ 25 ವರ್ಷಗಳಿಂದ ಮನೆಗಳನ್ನು ತೆರವುಮಾಡಿ ರಸ್ತೆ ವಿಸ್ತರಣೆ ಕಾರ್ಯ ಮಾಡಲು ಸಾಧ್ಯವಾಗಿರಲಿಲ್ಲ. ಈಗ ರಸ್ತೆಗೆ ಅಡ್ಡಲಾಗಿದ್ದ 24 ಮನೆಗಳನ್ನು ತೆರವು ಮಾಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಯಿತು.</p>.<p>ರೈಲ್ವೆ ಹಳಿ ಸಮೀಪದಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸಲು ಲೋಕೋಪಯೋಗಿ ಇಲಾಖೆ ವತಿಯಿಂದ ₹5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮನೆಗಳನ್ನು ತೆರವು ಮಾಡಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪಾಲಿಕೆಗೆ ಪತ್ರ ಬರೆದಿದ್ದರು. ಸರ್ವೆ ಮಾಡಿ, ತೆರವಿಗೆ ಗುರುತು ಮಾಡಲಾಗಿತ್ತು. ಇದಕ್ಕೆ ಆರಂಭದಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು.</p>.<p>ಯಾವುದೇ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿರಲಿಲ್ಲ. ಕಟ್ಟಡಗಳ ದಾಖಲೆಗಳು ಸಮರ್ಪಕವಾಗಿದ್ದವು. ಇದನ್ನು ಪರಿಶೀಲಿಸಿದ ಪಾಲಿಕೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವ ಭರವಸೆ ಕೊಟ್ಟಿದ್ದರು. ಇದಕ್ಕೆ ಸ್ಪಂದಿಸಿ, ತೆರವಿಗೆ ಸಹಕಾರ ನೀಡಿದರು. ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.</p>.<p>ಮೇಯರ್ ಬಿ.ಜಿ.ಕೃಷ್ಣಪ್ಪ, ಆಯುಕ್ತರಾದ ರೇಣುಕಾ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದು, ತೆರವು ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಬಿ.ಎಚ್.ರಸ್ತೆಯಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸುವ ಬಟವಾಡಿ ಬಳಿಯ 35ನೇ ವಾರ್ಡ್ನ ಸಾಬರ ಪಾಳ್ಯದಲ್ಲಿ ರಸ್ತೆಗೆ ಅಡ್ಡಲಾಗಿದ್ದ ಮನೆಗಳನ್ನು ಶುಕ್ರವಾರ ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.</p>.<p>ಕಳೆದ 25 ವರ್ಷಗಳಿಂದ ಮನೆಗಳನ್ನು ತೆರವುಮಾಡಿ ರಸ್ತೆ ವಿಸ್ತರಣೆ ಕಾರ್ಯ ಮಾಡಲು ಸಾಧ್ಯವಾಗಿರಲಿಲ್ಲ. ಈಗ ರಸ್ತೆಗೆ ಅಡ್ಡಲಾಗಿದ್ದ 24 ಮನೆಗಳನ್ನು ತೆರವು ಮಾಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡಲಾಯಿತು.</p>.<p>ರೈಲ್ವೆ ಹಳಿ ಸಮೀಪದಿಂದ ರಿಂಗ್ ರಸ್ತೆಗೆ ಸಂಪರ್ಕ ಕಲ್ಪಿಸಲು ಲೋಕೋಪಯೋಗಿ ಇಲಾಖೆ ವತಿಯಿಂದ ₹5 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮನೆಗಳನ್ನು ತೆರವು ಮಾಡಿಸಿಕೊಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪಾಲಿಕೆಗೆ ಪತ್ರ ಬರೆದಿದ್ದರು. ಸರ್ವೆ ಮಾಡಿ, ತೆರವಿಗೆ ಗುರುತು ಮಾಡಲಾಗಿತ್ತು. ಇದಕ್ಕೆ ಆರಂಭದಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು.</p>.<p>ಯಾವುದೇ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿರಲಿಲ್ಲ. ಕಟ್ಟಡಗಳ ದಾಖಲೆಗಳು ಸಮರ್ಪಕವಾಗಿದ್ದವು. ಇದನ್ನು ಪರಿಶೀಲಿಸಿದ ಪಾಲಿಕೆ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವ ಭರವಸೆ ಕೊಟ್ಟಿದ್ದರು. ಇದಕ್ಕೆ ಸ್ಪಂದಿಸಿ, ತೆರವಿಗೆ ಸಹಕಾರ ನೀಡಿದರು. ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.</p>.<p>ಮೇಯರ್ ಬಿ.ಜಿ.ಕೃಷ್ಣಪ್ಪ, ಆಯುಕ್ತರಾದ ರೇಣುಕಾ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದು, ತೆರವು ಕಾರ್ಯಾಚರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>