ಚಿಕ್ಕನಾಯಕನಹಳ್ಳಿ, ಕುಣಿಗಲ್, ಪಾವಗಡ, ಕೊರಟಗೆರೆಯಲ್ಲಿ ಪೌರ ಕಾರ್ಮಿಕರಿಗೆ ಪಿ.ಎಫ್ ಹಣ ಪಾವತಿ ಮಾಡಿಲ್ಲ. ಚಿಕ್ಕನಾಯಕನಹಳ್ಳಿಯಲ್ಲಿ ಸುಮಾರು ₹60 ಲಕ್ಷ ಪಿ.ಎಫ್ ಹಣ ಜಮಾ ಮಾಡಬೇಕಿತ್ತು. ಹಣ ದುರುಪಯೋಗ ಪಡಿಸಿಕೊಂಡ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.