ನೇತ್ರದೀಪ ಕಣ್ಣಿನ ಆಸ್ಪತ್ರೆಯ ಡಾ.ಲತಾ ನೇತೃತ್ವದ ವೈದ್ಯರು ಮತ್ತು ಸಿಬ್ಬಂದಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೂ ನೇತ್ರ ತಪಾಸಣೆ ನಡೆಸಿದರು. ತಪಾಸಣೆಗೆ ಬಂದಿದ್ದವರಿಗೆ ಸಾಯಿಮಂದಿರ ಟ್ರಸ್ಟ್ ಉಪಾಹಾರ ವ್ಯವಸ್ಥೆ ಮಾಡಿತ್ತು. ಟ್ರಸ್ಟ್ ಅಧ್ಯಕ್ಷ ನಟರಾಜು, ಟ್ರಸ್ಟಿಗಳಾದ ನಂಜುಂಡಶೆಟ್ಟಿ, ಸುಜಯ್ ಬಾಬು ಹಾಗೂ ರೋಟರಿ ಪದಾಧಿಕಾರಿಗಳು ಇದ್ದರು.