<p><strong>ತುಮಕೂರು: </strong>‘ಸಂವಿಧಾನದ ಅಡಿಯಲ್ಲಿ ಎಲ್ಲ ಜಾತಿ, ಸಮುದಾಯದ ಜನರಿಗೂ ಸಮಾನವಾಗಿ ಬದುಕುವ ಅವಕಾಶ ಇದೆ’ ಎಂದು ತುಮಕೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ನುಡಿದರು.</p>.<p>ಗೌತಮ ಬುದ್ಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ‘ಭಾರತ ದೇಶದ ಸಂವಿಧಾನ ಮೀಸಲಾತಿ ಒಂದು ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೀಸಲಾತಿ ಬಗ್ಗೆ ಕೆಲವರು ತಪ್ಪು ಅಭಿಪ್ರಾಯಗಳನ್ನು ಕಲ್ಪಿಸುತ್ತಿದ್ದಾರೆ. ಶತಮಾನಗಳಿಂದ ಶೋಷಣೆ ಅನುಭವಿಸಿದ ಕೆಲವು ಸಮುದಾಯಗಳ ಅಭಿವೃದ್ಧಿಗೆ ಮೀಸಲಾತಿ ವರದಾನವಾಯಿತು ಎಂದರು.</p>.<p>ಹಿರಿಯ ಪತ್ರಕರ್ತ ದೇವರಾಜ್, ‘ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸಲು ಹೆಚ್ಚು ಪುಸ್ತಕಗಳನ್ನು ಓದಬೇಕು. ಬಿ.ಆರ್ ಅಂಬೇಡ್ಕರ್ ಅವರ ರೀತಿಯಲ್ಲಿ ನೀವು ವಿದೇಶಗಳಲ್ಲಿ ಶಿಕ್ಷಣ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅವಕಾಶ ಇದ್ದು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ಜಿ.ಕೆ.ನಾಗಣ್ಣ, ‘ಸಾಂವಿಧಾನ ಮತ್ತು ಮೀಸಲಾತಿ, ಉಳಿಸಿಕೊಳ್ಳುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲಿದೆ’ ಎಂದರು. ಜೆ.ಸಿ ರಂಗಧಾಮಯ್ಯ ಮಾತನಾಡಿದರು. ಶ್ರೀನಿವಾಸ, ಶಂಕರ್, ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಸಂವಿಧಾನದ ಅಡಿಯಲ್ಲಿ ಎಲ್ಲ ಜಾತಿ, ಸಮುದಾಯದ ಜನರಿಗೂ ಸಮಾನವಾಗಿ ಬದುಕುವ ಅವಕಾಶ ಇದೆ’ ಎಂದು ತುಮಕೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ನುಡಿದರು.</p>.<p>ಗೌತಮ ಬುದ್ಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನಗರದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ‘ಭಾರತ ದೇಶದ ಸಂವಿಧಾನ ಮೀಸಲಾತಿ ಒಂದು ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮೀಸಲಾತಿ ಬಗ್ಗೆ ಕೆಲವರು ತಪ್ಪು ಅಭಿಪ್ರಾಯಗಳನ್ನು ಕಲ್ಪಿಸುತ್ತಿದ್ದಾರೆ. ಶತಮಾನಗಳಿಂದ ಶೋಷಣೆ ಅನುಭವಿಸಿದ ಕೆಲವು ಸಮುದಾಯಗಳ ಅಭಿವೃದ್ಧಿಗೆ ಮೀಸಲಾತಿ ವರದಾನವಾಯಿತು ಎಂದರು.</p>.<p>ಹಿರಿಯ ಪತ್ರಕರ್ತ ದೇವರಾಜ್, ‘ಐಎಎಸ್, ಕೆಎಎಸ್ ಪರೀಕ್ಷೆ ಎದುರಿಸಲು ಹೆಚ್ಚು ಪುಸ್ತಕಗಳನ್ನು ಓದಬೇಕು. ಬಿ.ಆರ್ ಅಂಬೇಡ್ಕರ್ ಅವರ ರೀತಿಯಲ್ಲಿ ನೀವು ವಿದೇಶಗಳಲ್ಲಿ ಶಿಕ್ಷಣ ಪಡೆಯಲು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅವಕಾಶ ಇದ್ದು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಉಪನ್ಯಾಸಕ ಜಿ.ಕೆ.ನಾಗಣ್ಣ, ‘ಸಾಂವಿಧಾನ ಮತ್ತು ಮೀಸಲಾತಿ, ಉಳಿಸಿಕೊಳ್ಳುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲಿದೆ’ ಎಂದರು. ಜೆ.ಸಿ ರಂಗಧಾಮಯ್ಯ ಮಾತನಾಡಿದರು. ಶ್ರೀನಿವಾಸ, ಶಂಕರ್, ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>