<p><strong>ತುಮಕೂರು: </strong>‘ಚುನಾವಣೆ: ಒಳ– ಹೊರಗೆ ಮಹಿಳೆಯರು’ ಎಂಬ ವಿಷಯ ಕುರಿತು ಸೆ.30ರಂದು ನಗರದ ಕನ್ನಡ ಭವನದಲ್ಲಿ ಭಾನುವಾರ ( ಸೆ.30ರಂದು ) ಬೆಳಿಗ್ಗೆ 10.30ಕ್ಕೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.</p>.<p>ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಜಿಲ್ಲಾ ಕನ್ನಡ ಸಾಹಿತ್ಯ ಆಶ್ರಯದಲ್ಲಿ ಆಯೋಜಿಸಲಾಗಿದೆ.</p>.<p>ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಧ್ಯಕ್ಷತೆವಹಿಸಲಿದ್ದು, ಸೂಲಗಿತ್ತಿ ನರಸಮ್ಮ ಉಪಸ್ಥಿತರಿರುವರು. ಸಮತಾ ಬಳಗದ ಡಾ.ಅರುಂಧತಿ, ಮಾಜಿ ಸಚಿವೆಯರಾದ ಲೀಲಾದೇವಿ ಆರ್. ಪ್ರಸಾದ್, ಬಿ.ಟಿ.ಲಲಿತಾ ನಾಯಕ್ , ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ಭಾಗವಹಿಸಲಿದ್ದಾರೆ.</p>.<p>ಚುನಾವಣಾ ಸುಧಾರಣೆ ಕುರಿತು ‘ಪ್ರಜಾವಾಣಿ’ ಸಹಾಯಕ ಸಂಪಾದಕಿ ಸಿ.ಜಿ.ಮಂಜುಳಾ, ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಕುರಿತು ಹೈಕೋರ್ಟ್ ವಕೀಲರಾದ ಎಚ್.ವಿ.ಮಂಜುನಾಥ್ ಮಾತನಾಡುವರು. ಅಧ್ಯಕ್ಷತೆಯನ್ನು ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಡಾ.ಎಚ್.ಎಸ್.ಅನುಪಮ ವಹಿಸಲಿದ್ದಾರೆ.</p>.<p>ಸಂವಾದದಲ್ಲಿ ವಿವಿಧ ಸಂಘಟನೆ ಮುಖಂಡರು, ಲೇಖಕಿಯರು ಭಾಗವಹಿಸುವರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯೆಯರಿಗೆ ಸನ್ಮಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>‘ಚುನಾವಣೆ: ಒಳ– ಹೊರಗೆ ಮಹಿಳೆಯರು’ ಎಂಬ ವಿಷಯ ಕುರಿತು ಸೆ.30ರಂದು ನಗರದ ಕನ್ನಡ ಭವನದಲ್ಲಿ ಭಾನುವಾರ ( ಸೆ.30ರಂದು ) ಬೆಳಿಗ್ಗೆ 10.30ಕ್ಕೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.</p>.<p>ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ಜಿಲ್ಲಾ ಕನ್ನಡ ಸಾಹಿತ್ಯ ಆಶ್ರಯದಲ್ಲಿ ಆಯೋಜಿಸಲಾಗಿದೆ.</p>.<p>ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅಧ್ಯಕ್ಷತೆವಹಿಸಲಿದ್ದು, ಸೂಲಗಿತ್ತಿ ನರಸಮ್ಮ ಉಪಸ್ಥಿತರಿರುವರು. ಸಮತಾ ಬಳಗದ ಡಾ.ಅರುಂಧತಿ, ಮಾಜಿ ಸಚಿವೆಯರಾದ ಲೀಲಾದೇವಿ ಆರ್. ಪ್ರಸಾದ್, ಬಿ.ಟಿ.ಲಲಿತಾ ನಾಯಕ್ , ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲತಾ ರವಿಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ಭಾಗವಹಿಸಲಿದ್ದಾರೆ.</p>.<p>ಚುನಾವಣಾ ಸುಧಾರಣೆ ಕುರಿತು ‘ಪ್ರಜಾವಾಣಿ’ ಸಹಾಯಕ ಸಂಪಾದಕಿ ಸಿ.ಜಿ.ಮಂಜುಳಾ, ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಕುರಿತು ಹೈಕೋರ್ಟ್ ವಕೀಲರಾದ ಎಚ್.ವಿ.ಮಂಜುನಾಥ್ ಮಾತನಾಡುವರು. ಅಧ್ಯಕ್ಷತೆಯನ್ನು ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಡಾ.ಎಚ್.ಎಸ್.ಅನುಪಮ ವಹಿಸಲಿದ್ದಾರೆ.</p>.<p>ಸಂವಾದದಲ್ಲಿ ವಿವಿಧ ಸಂಘಟನೆ ಮುಖಂಡರು, ಲೇಖಕಿಯರು ಭಾಗವಹಿಸುವರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಪಾಲಿಕೆಗೆ ನೂತನವಾಗಿ ಆಯ್ಕೆಯಾದ ಮಹಿಳಾ ಸದಸ್ಯೆಯರಿಗೆ ಸನ್ಮಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>