ಕುಣಿಗಲ್: ಎಡೆಯೂರು ಹೋಬಳಿ ಕಗ್ಗರೆ ಗ್ರಾಮದಲ್ಲಿ ಹರಿಯುತ್ತಿರುವ ಶಿಂಷಾ ನದಿಯ ಉಪನದಿ ಸೇರಿದಂತೆ ನಾಗಿಣಿ ನದಿ ಪಾತ್ರದಲ್ಲಿ ಮರಳುಗಾರಿಕೆಯನ್ನು ಸರ್ಕಾರ ನಿಷೇಧಿಸಿದ್ದರೂ, ಕಾಮಗಾರಿ ನೆಪದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಹೀಗಿದ್ದರೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮೌನವಾಗಿದ್ದಾರೆ ಎಂದು ಭಾರತೀಯ ಕೃಷಿಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಬೀಚನಹಳ್ಳಿ ಶ್ರೀನಿವಾಸ್ ಆರೋಪಿಸಿದ್ದಾರೆ.