ನಿವೃತ್ತ ಪ್ರಾಂಶುಪಾಲ ಪ್ರೊ.ಸೈಯದ್ ಬಾಷಾ ಮಾತನಾಡಿ, ‘ಭಾರತ ಹಲವು ಧರ್ಮ, ಜಾತಿ, ಸಂಸ್ಕೃತಿಗಳ ತೊಟ್ಟಿಲು. ಇಲ್ಲಿ ನಾವೆಲ್ಲರೂ ಪರಸ್ವರ ಪ್ರೀತಿ, ವಿಶ್ವಾಸದಿಂದ ಬಾಳಿದಾಗ ಮಾತ್ರ ಶಾಂತಿ ನೆಲಸಲು ಸಾಧ್ಯ. ಇಂದಿನ ಪ್ರತಿಕೂಲ ಪರಿಸ್ಥಿತಿಯಲ್ಲಿ ಎಲ್ಲ ಧರ್ಮಗಳ ಮುಖ್ಯಸ್ಥರು, ದೇಶದ ಐಕ್ಯತೆ ಮತ್ತು ಸಮಗ್ರತೆಯ ದೃಷ್ಟಿಯಿಂದ ಪರಸ್ಪರರನ್ನು ಗೌರವಿಸುವ ಮೂಲಕ ದೇಶದ ಜನರು ನೆಮ್ಮದಿಯಿಂದ ಬಾಳುವಂತೆ ಮಾಡಬೇಕಿದೆ’ ಎಂದರು.