<p><strong>ತುಮಕೂರು:</strong> ಪ್ರಸ್ತುತ ಸಾಮಾಜಿಕ ಜಾಲ ತಾಣದಲ್ಲಿ ಗಾಂಧೀಜಿ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರ ವಿಚಾರಧಾರೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದೆ ಎಂದು ಬೆಂಗಳೂರಿನ ಗಾಂಧಿ ಭವನದ ಅಧ್ಯಕ್ಷ ವೂಡೇ ಪಿ.ಕೃಷ್ಣ ವಿಷಾದಿಸಿದರು.</p>.<p>ನಗರದಲ್ಲಿ ಮಂಗಳವಾರ ಬಾಪೂಜಿ ವಿದ್ಯಾಸಂಸ್ಥೆಯಿಂದ ಆಯೋಜಿಸಿದ್ದ ಸರ್ವೋದಯ ದಿನಾಚರಣೆ, ಮಹಾತ್ಮ ಗಾಂಧಿ ಆತ್ಮ ಕಥನ ‘ನನ್ನ ಸತ್ಯಾನ್ವೇಷಣೆ’ಯ ಶತಮಾನೋತ್ಸವ, ಎಂ.ಬಸವಯ್ಯ ರಚನೆಯ ‘ಸತ್ಯಾನ್ವೇಷಣೆ ಒಂದು ಮಹಾಕೃತಿ’, ಎಚ್.ಎಸ್.ಸುರೇಶ್ ಅವರ ‘ಘಾತಕ ಲೋಕದಿಂದ ಗಾಂಧಿಯಾನದೆಡೆಗೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗಾಂಧೀಜಿ ಅವರನ್ನು ಇಡೀ ಪ್ರಪಂಚ ಸತ್ಯ ಮತ್ತು ಅಹಿಂಸೆಯ ಪ್ರತಿರೂಪವಾಗಿ ನೋಡುತ್ತಿದೆ. ದೇಶದ ಯುವ ಸಮೂಹ ಏಕಾಗ್ರತೆ ಕೊರತೆಯಿಂದ ಸತ್ಯ, ಸುಳ್ಳುಗಳ ವಿಮರ್ಶೆ ಮಾಡುತ್ತಿಲ್ಲ. ಯುವ ಜನರಿಗೆ ಎಂ.ಬಸವಯ್ಯ ಅವರ ಸತ್ಯಾನ್ವೇಷಣೆ ಕೃತಿ ಗಾಂಧೀಜಿಯ ಬದುಕಿನ ವಿವಿಧ ಮಜಲುಗಳನ್ನು ಪರಿಚಯಿಸಲಿದೆ ಎಂದರು.</p>.<p>ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ, ‘ಸತ್ಯಾನ್ವೇಷಣೆ ಒಂದು ಮಹಾಕೃತಿ’, ‘ಘಾತಕ ಲೋಕದಿಂದ ಗಾಂಧಿಯಾನದೆಡೆಗೆ’ ಪುಸ್ತಕಗಳನ್ನು ಜಿಲ್ಲೆಯ ಪ್ರತಿ ಶಾಲಾ–ಕಾಲೇಜಿಗೆ ತಲುಪಿಸಲಾಗುವುದು. ಕಾರಾಗೃಹದ ಕೈದಿಗಳಿಗೂ ನೀಡಲಾಗುವುದು’ ಎಂದು ಹೇಳಿದರು.</p>.<p>ಗಾಂಧಿ ಸ್ಮಾರಕ ನಿಧಿಯ ನಿರ್ದೇಶಕ ಪ್ರೊ.ಜಿ.ಬಿ.ಶಿವರಾಜು, ಬಾಪೂಜಿ ವಿದ್ಯಾ ಸಂಸ್ಥೆ ಅಧ್ಯಕ್ಷ ಎಂ.ಬಸವಯ್ಯ, ಕಾರ್ಯದರ್ಶಿ ಭಾಗ್ಯಮ್ಮ ಬಸವಯ್ಯ, ಗಾಂಧಿ ಭವನದ ಕಾರ್ಯದರ್ಶಿ ನರೇಂದ್ರ, ಪರಿಸರವಾದಿ ಸಿ.ಯತಿರಾಜು, ಬಾಪೂಜಿ ವಿದ್ಯಾ ಸಂಸ್ಥೆಯ ಗೋವಿಂದಯ್ಯ, ಸುಮಂಗಲಾ ಜೇಮ್ಸ್, ಪ್ರೊ.ಸಿದ್ಧಿಬಾಬು, ಜಿ.ಚಿದಾನಂದಸ್ವಾಮಿ. ಜಿ.ಬಿಂದುಶ್ರೀ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರಸ್ತುತ ಸಾಮಾಜಿಕ ಜಾಲ ತಾಣದಲ್ಲಿ ಗಾಂಧೀಜಿ ವಿರುದ್ಧ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅವರ ವಿಚಾರಧಾರೆಗಳನ್ನು ಕೊಲ್ಲುವ ಪ್ರಯತ್ನ ನಡೆಯುತ್ತಿದೆ ಎಂದು ಬೆಂಗಳೂರಿನ ಗಾಂಧಿ ಭವನದ ಅಧ್ಯಕ್ಷ ವೂಡೇ ಪಿ.ಕೃಷ್ಣ ವಿಷಾದಿಸಿದರು.</p>.<p>ನಗರದಲ್ಲಿ ಮಂಗಳವಾರ ಬಾಪೂಜಿ ವಿದ್ಯಾಸಂಸ್ಥೆಯಿಂದ ಆಯೋಜಿಸಿದ್ದ ಸರ್ವೋದಯ ದಿನಾಚರಣೆ, ಮಹಾತ್ಮ ಗಾಂಧಿ ಆತ್ಮ ಕಥನ ‘ನನ್ನ ಸತ್ಯಾನ್ವೇಷಣೆ’ಯ ಶತಮಾನೋತ್ಸವ, ಎಂ.ಬಸವಯ್ಯ ರಚನೆಯ ‘ಸತ್ಯಾನ್ವೇಷಣೆ ಒಂದು ಮಹಾಕೃತಿ’, ಎಚ್.ಎಸ್.ಸುರೇಶ್ ಅವರ ‘ಘಾತಕ ಲೋಕದಿಂದ ಗಾಂಧಿಯಾನದೆಡೆಗೆ’ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗಾಂಧೀಜಿ ಅವರನ್ನು ಇಡೀ ಪ್ರಪಂಚ ಸತ್ಯ ಮತ್ತು ಅಹಿಂಸೆಯ ಪ್ರತಿರೂಪವಾಗಿ ನೋಡುತ್ತಿದೆ. ದೇಶದ ಯುವ ಸಮೂಹ ಏಕಾಗ್ರತೆ ಕೊರತೆಯಿಂದ ಸತ್ಯ, ಸುಳ್ಳುಗಳ ವಿಮರ್ಶೆ ಮಾಡುತ್ತಿಲ್ಲ. ಯುವ ಜನರಿಗೆ ಎಂ.ಬಸವಯ್ಯ ಅವರ ಸತ್ಯಾನ್ವೇಷಣೆ ಕೃತಿ ಗಾಂಧೀಜಿಯ ಬದುಕಿನ ವಿವಿಧ ಮಜಲುಗಳನ್ನು ಪರಿಚಯಿಸಲಿದೆ ಎಂದರು.</p>.<p>ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ, ‘ಸತ್ಯಾನ್ವೇಷಣೆ ಒಂದು ಮಹಾಕೃತಿ’, ‘ಘಾತಕ ಲೋಕದಿಂದ ಗಾಂಧಿಯಾನದೆಡೆಗೆ’ ಪುಸ್ತಕಗಳನ್ನು ಜಿಲ್ಲೆಯ ಪ್ರತಿ ಶಾಲಾ–ಕಾಲೇಜಿಗೆ ತಲುಪಿಸಲಾಗುವುದು. ಕಾರಾಗೃಹದ ಕೈದಿಗಳಿಗೂ ನೀಡಲಾಗುವುದು’ ಎಂದು ಹೇಳಿದರು.</p>.<p>ಗಾಂಧಿ ಸ್ಮಾರಕ ನಿಧಿಯ ನಿರ್ದೇಶಕ ಪ್ರೊ.ಜಿ.ಬಿ.ಶಿವರಾಜು, ಬಾಪೂಜಿ ವಿದ್ಯಾ ಸಂಸ್ಥೆ ಅಧ್ಯಕ್ಷ ಎಂ.ಬಸವಯ್ಯ, ಕಾರ್ಯದರ್ಶಿ ಭಾಗ್ಯಮ್ಮ ಬಸವಯ್ಯ, ಗಾಂಧಿ ಭವನದ ಕಾರ್ಯದರ್ಶಿ ನರೇಂದ್ರ, ಪರಿಸರವಾದಿ ಸಿ.ಯತಿರಾಜು, ಬಾಪೂಜಿ ವಿದ್ಯಾ ಸಂಸ್ಥೆಯ ಗೋವಿಂದಯ್ಯ, ಸುಮಂಗಲಾ ಜೇಮ್ಸ್, ಪ್ರೊ.ಸಿದ್ಧಿಬಾಬು, ಜಿ.ಚಿದಾನಂದಸ್ವಾಮಿ. ಜಿ.ಬಿಂದುಶ್ರೀ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>