<p><strong>ತುರುವೇಕೆರೆ</strong>: ಪಟ್ಟಣದ ಸತ್ಯಗಣಪತಿಯನ್ನು ಅಪಾರ ಸಂಖ್ಯೆಯ ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ತುರುವೇಕೆರೆ ಕೆರೆಯಲ್ಲಿ ತೆಪ್ಪೋತ್ಸವದ ಮೂಲಕ ಮಂಗಳವಾರ ಸಂಜೆ ವಿಸರ್ಜನೆ ಮಾಡಲಾಯಿತು.</p>.<p>ಗಣಪತಿಯನ್ನು ಗೌರಿ ಗಣೇಶ ಹಬ್ಬದ ದಿನ ಪ್ರತಿಷ್ಠಾಪಿಸಲಾಗಿತ್ತು. ದಿನನಿತ್ಯ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಜಾತ್ರೆಯ ಅಂಗವಾಗಿ ಕಳೆದ ಹದಿನೈದು ದಿನಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತ್ತು. ಅಂಗಡಿ ಮಾಲೀಕರು ತಮ್ಮ ಅಂಗಡಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಿದ್ದರು. </p>.<p>ಸೋಮವಾರ ಸಂಜೆ ಪುಷ್ಪ ಮಂಟಪದ ವಿಶೇಷ ಅಲಂಕಾರದೊಂದಿಗೆ ಸತ್ಯಗಣಪತಿ ಹಾಗೂ ಗ್ರಾಮ ದೇವತೆ ಉಡಿಸಲಮ್ಮ ದೇವಿಯನ್ನು ಕುಳ್ಳಿರಿಸಿ ರಾಜ ಬೀದಿಗಳಲ್ಲಿ ಉತ್ಸವ ಮಾಡಲಾಯಿತು.</p>.<p>ಮೆರವಣಿಗೆ ವೇಳೆ ಕೀಲು ಕುದುರೆ, ಚೆಂಡೆವಾದ್ಯ, ಹುಲಿವೇಷಧಾರಿಗಳ ನೃತ್ಯ ಪ್ರದರ್ಶನ, ಡಿಜಿ ಸೌಂಡ್, ಡೊಳ್ಳು ಕುಣಿತ, ನಾಸಿಕ್ ಬ್ಯಾಂಡ್ ಸೇರಿದಂತೆ ಹಲವಾರು ಜಾನಪದ ಕಲಾ ತಂಡಗಳು ಜಾತ್ರೆಗೆ ಮೆರುಗು ತಂದಿದ್ದವು. </p>.<p>ಸಂಜೆ ಮಹಾ ಮಂಗಳಾರತಿಯೊಂದಿಗೆ ಕೆರೆಯಲ್ಲಿ ಸತ್ಯಗಣಪತಿಯನ್ನು ತೆಪ್ಪದಲ್ಲಿ ಕುಳ್ಳಿರಿಸಿ ಸಿಡಿಮದ್ದು ಸಿಡಿಸುವುದರೊಂದಿಗೆ ವಿಸರ್ಜಿಸಲಾಯಿತು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ, ಸತ್ಯಗಣಪತಿ ಸೇವಾ ಸಮಾಜದ ಅಧ್ಯಕ್ಷ ಆರ್.ಮಲ್ಲಿಕಾರ್ಜುನ್ ಸತೀಶ್, ಟಿ.ಎನ್.ರಘು, ಸಂಗಲಾಪುರ ಶಿವಣ್ಣ, ಅಶೋಕ್, ಮೆಕಾನಿಕ್ ಉಮೇಶ್, ಶಶಾಂಕ್, ಸ್ಟುಡಿಯೋ ಅಭಿ, ಉಪ್ಪಿ, ಮಂಜುನಾಥ್, ಲಕ್ಷ್ಮಣ್, ದರ್ಶನ್, ನಂದಕುಮಾರ್, ಶ್ರೀಧರ್, ಶಶಿಕುಮಾರ್, ಆಶಾ, ಮೋಹನ್, ನಿತಿನ್, ಶಾಮಣ್ಣ, ಗುರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ಪಟ್ಟಣದ ಸತ್ಯಗಣಪತಿಯನ್ನು ಅಪಾರ ಸಂಖ್ಯೆಯ ಭಕ್ತಾಧಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ತುರುವೇಕೆರೆ ಕೆರೆಯಲ್ಲಿ ತೆಪ್ಪೋತ್ಸವದ ಮೂಲಕ ಮಂಗಳವಾರ ಸಂಜೆ ವಿಸರ್ಜನೆ ಮಾಡಲಾಯಿತು.</p>.<p>ಗಣಪತಿಯನ್ನು ಗೌರಿ ಗಣೇಶ ಹಬ್ಬದ ದಿನ ಪ್ರತಿಷ್ಠಾಪಿಸಲಾಗಿತ್ತು. ದಿನನಿತ್ಯ ಪೂಜಾ ಕಾರ್ಯಗಳು ನಡೆಯುತ್ತಿದ್ದವು. ಜಾತ್ರೆಯ ಅಂಗವಾಗಿ ಕಳೆದ ಹದಿನೈದು ದಿನಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತ್ತು. ಅಂಗಡಿ ಮಾಲೀಕರು ತಮ್ಮ ಅಂಗಡಿಗಳನ್ನು ವಿದ್ಯುತ್ ದೀಪಗಳಿಂದ ಸಿಂಗರಿಸಿದ್ದರು. </p>.<p>ಸೋಮವಾರ ಸಂಜೆ ಪುಷ್ಪ ಮಂಟಪದ ವಿಶೇಷ ಅಲಂಕಾರದೊಂದಿಗೆ ಸತ್ಯಗಣಪತಿ ಹಾಗೂ ಗ್ರಾಮ ದೇವತೆ ಉಡಿಸಲಮ್ಮ ದೇವಿಯನ್ನು ಕುಳ್ಳಿರಿಸಿ ರಾಜ ಬೀದಿಗಳಲ್ಲಿ ಉತ್ಸವ ಮಾಡಲಾಯಿತು.</p>.<p>ಮೆರವಣಿಗೆ ವೇಳೆ ಕೀಲು ಕುದುರೆ, ಚೆಂಡೆವಾದ್ಯ, ಹುಲಿವೇಷಧಾರಿಗಳ ನೃತ್ಯ ಪ್ರದರ್ಶನ, ಡಿಜಿ ಸೌಂಡ್, ಡೊಳ್ಳು ಕುಣಿತ, ನಾಸಿಕ್ ಬ್ಯಾಂಡ್ ಸೇರಿದಂತೆ ಹಲವಾರು ಜಾನಪದ ಕಲಾ ತಂಡಗಳು ಜಾತ್ರೆಗೆ ಮೆರುಗು ತಂದಿದ್ದವು. </p>.<p>ಸಂಜೆ ಮಹಾ ಮಂಗಳಾರತಿಯೊಂದಿಗೆ ಕೆರೆಯಲ್ಲಿ ಸತ್ಯಗಣಪತಿಯನ್ನು ತೆಪ್ಪದಲ್ಲಿ ಕುಳ್ಳಿರಿಸಿ ಸಿಡಿಮದ್ದು ಸಿಡಿಸುವುದರೊಂದಿಗೆ ವಿಸರ್ಜಿಸಲಾಯಿತು.</p>.<p>ಶಾಸಕ ಎಂ.ಟಿ.ಕೃಷ್ಣಪ್ಪ, ಸತ್ಯಗಣಪತಿ ಸೇವಾ ಸಮಾಜದ ಅಧ್ಯಕ್ಷ ಆರ್.ಮಲ್ಲಿಕಾರ್ಜುನ್ ಸತೀಶ್, ಟಿ.ಎನ್.ರಘು, ಸಂಗಲಾಪುರ ಶಿವಣ್ಣ, ಅಶೋಕ್, ಮೆಕಾನಿಕ್ ಉಮೇಶ್, ಶಶಾಂಕ್, ಸ್ಟುಡಿಯೋ ಅಭಿ, ಉಪ್ಪಿ, ಮಂಜುನಾಥ್, ಲಕ್ಷ್ಮಣ್, ದರ್ಶನ್, ನಂದಕುಮಾರ್, ಶ್ರೀಧರ್, ಶಶಿಕುಮಾರ್, ಆಶಾ, ಮೋಹನ್, ನಿತಿನ್, ಶಾಮಣ್ಣ, ಗುರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>