ಕೊರಚ, ಭೋವಿ, ಲಂಬಾಣಿ ಸಮುದಾಯಗಳು ಸ್ವಾತಂತ್ರ್ಯ ಪೂರ್ವದಲ್ಲಿ ಮಿಲ್ಲರ್ ಆಯೋಗದ ವರದಿ ಅನುಸಾರ ಶೋಷಿತ ವರ್ಗಗಳ ಪಟ್ಟಿಯಲ್ಲಿದ್ದವು. ನಂತರ ಈ ಜಾತಿಗಳನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಜಾತಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಮೂಲಭೂತವಾದಿಗಳು ಕೊರಮ, ಕೊರಚ, ಭೋವಿ, ಲಂಬಾಣಿ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈ ಬಿಡುವಂತೆ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸುಪ್ರಿಂಕೋರ್ಟ್ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಎಸ್ಸಿ ಆಯೋಗವು ಕರ್ನಾಟಕ ಸರ್ಕಾರಕ್ಕೆ ವರದಿ ಕೇಳಿದೆ. ಸರ್ಕಾರವು ಎಸ್ಸಿ ಪಟ್ಟಿಯಲ್ಲೇ ಈ ಸಮುದಾಯಗಳನ್ನು ಉಳಿಸಲು ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.