<p><strong>ತುಮಕೂರು: </strong>ಸಾವಿತ್ರಿಬಾಯಿ ಫುಲೆ ಅವರುಹೆಣ್ಣು ಮಕ್ಕಳಿಗೆ ಅಕ್ಷರದ ಮಹತ್ವವನ್ನು ತಿಳಿಸಿಕೊಟ್ಟರು ಎಂದು ಲೇಖಕಿ ಮಲ್ಲಿಕಾ ಬಸವರಾಜು ಅವರು ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರ ಹಾಗೂ ವಿ.ವಿ. ಕಲಾ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ನಡೆದ ‘ಸಾವಿತ್ರಿಬಾಯಿ ಫುಲೆ ನೆನಪು’ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.</p>.<p>ಸಾವಿತ್ರಿಬಾಯಿ ಫುಲೆ ಅವರು ದೇಶದ ಮೊದಲ ಶಿಕ್ಷಕಿ. ಮೊದಲಿಗೆ ಶಾಲೆಯನ್ನು ತೆರೆದು ಒಂಭತ್ತು ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ಕೊಟ್ಟರು. ಸಮಾಜದಲ್ಲಿ ನಡೆದ ಅವಮಾನಗಳನ್ನು, ದೌರ್ಜನ್ಯಗಳನ್ನು ಮತ್ತು ಅಡೆತಡೆಗಳನ್ನು ದಾಟಿ ನಡೆದ ಧೀರ ಮಹಿಳೆ ಅವರು ಎಂದರು.</p>.<p>ಸ್ತ್ರೀ ಶಿಕ್ಷಣ, ವಿಧವಾ ವಿವಾಹ ಪ್ರೋತ್ಸಾಹಿಸಿದರು. ಬಾಲ್ಯ ವಿವಾಹ, ಸತಿಸಹಗಮನ ಪದ್ಧತಿಯ ನಿರ್ಮೂಲನೆ ಮಾಡುವುದರಲ್ಲಿ ಮೊದಲಿಗರಾದರು ಎಂದರು.</p>.<p>ವಿಶ್ವವಿದ್ಯಾನಿಲಯ ಕಲಾಕಾಲೇಜಿನ ಪ್ರಾಂಶುಪಾಲ ಕೆ.ರಾಮಚಂದ್ರಪ್ಪ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಮಹಿಳಾ ಶಿಕ್ಷಣಕ್ಕೆ ಪ್ರಾಶಸ್ತ್ಯ ಕೊಟ್ಟವರು ಪುಲೆ ದಂಪತಿ. ಅವರ ಪರಿಶ್ರಮವನ್ನು ಇಂದು ಎಲ್ಲರೂ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೈ.ಎಸ್.ಸಿದ್ದೇಗೌಡ,ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕರಾದ ಜ್ಯೋತಿ, ವಿದ್ಯಾರ್ಥಿ ಕ್ಷೇಮ ಪಾಲನ ವಿಭಾಗದ ನಿರ್ದೇಶಕ ಎಂ.ಕೊಟ್ರೇಶ್, ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಜಾಯ್ ನೆರೆಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಸಾವಿತ್ರಿಬಾಯಿ ಫುಲೆ ಅವರುಹೆಣ್ಣು ಮಕ್ಕಳಿಗೆ ಅಕ್ಷರದ ಮಹತ್ವವನ್ನು ತಿಳಿಸಿಕೊಟ್ಟರು ಎಂದು ಲೇಖಕಿ ಮಲ್ಲಿಕಾ ಬಸವರಾಜು ಅವರು ಅಭಿಪ್ರಾಯಪಟ್ಟರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರ ಹಾಗೂ ವಿ.ವಿ. ಕಲಾ ಕಾಲೇಜಿನ ಸಹಯೋಗದಲ್ಲಿ ಶುಕ್ರವಾರ ನಡೆದ ‘ಸಾವಿತ್ರಿಬಾಯಿ ಫುಲೆ ನೆನಪು’ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.</p>.<p>ಸಾವಿತ್ರಿಬಾಯಿ ಫುಲೆ ಅವರು ದೇಶದ ಮೊದಲ ಶಿಕ್ಷಕಿ. ಮೊದಲಿಗೆ ಶಾಲೆಯನ್ನು ತೆರೆದು ಒಂಭತ್ತು ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ಕೊಟ್ಟರು. ಸಮಾಜದಲ್ಲಿ ನಡೆದ ಅವಮಾನಗಳನ್ನು, ದೌರ್ಜನ್ಯಗಳನ್ನು ಮತ್ತು ಅಡೆತಡೆಗಳನ್ನು ದಾಟಿ ನಡೆದ ಧೀರ ಮಹಿಳೆ ಅವರು ಎಂದರು.</p>.<p>ಸ್ತ್ರೀ ಶಿಕ್ಷಣ, ವಿಧವಾ ವಿವಾಹ ಪ್ರೋತ್ಸಾಹಿಸಿದರು. ಬಾಲ್ಯ ವಿವಾಹ, ಸತಿಸಹಗಮನ ಪದ್ಧತಿಯ ನಿರ್ಮೂಲನೆ ಮಾಡುವುದರಲ್ಲಿ ಮೊದಲಿಗರಾದರು ಎಂದರು.</p>.<p>ವಿಶ್ವವಿದ್ಯಾನಿಲಯ ಕಲಾಕಾಲೇಜಿನ ಪ್ರಾಂಶುಪಾಲ ಕೆ.ರಾಮಚಂದ್ರಪ್ಪ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಮಹಿಳಾ ಶಿಕ್ಷಣಕ್ಕೆ ಪ್ರಾಶಸ್ತ್ಯ ಕೊಟ್ಟವರು ಪುಲೆ ದಂಪತಿ. ಅವರ ಪರಿಶ್ರಮವನ್ನು ಇಂದು ಎಲ್ಲರೂ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂರು.</p>.<p>ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೈ.ಎಸ್.ಸಿದ್ದೇಗೌಡ,ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕರಾದ ಜ್ಯೋತಿ, ವಿದ್ಯಾರ್ಥಿ ಕ್ಷೇಮ ಪಾಲನ ವಿಭಾಗದ ನಿರ್ದೇಶಕ ಎಂ.ಕೊಟ್ರೇಶ್, ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಜಾಯ್ ನೆರೆಲ್ಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>