<p><strong>ತಿಪಟೂರು:</strong> ಒಳಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ದಂಡೋರದಿಂದ ನಗರಸಭಾ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ನಗರದ ಬಿ.ಎಚ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ ಹಾಗೂ ಶಿವಕುಮಾರ ಸ್ವಾಮಿಜಿ ವೃತ್ತದವರೆಗೂ ಅಂಬೇಡ್ಕರ್ ಭಾವಚಿತ್ರವಿರುವ ಬಾವುಟ ಹಿಡಿದು ಬೈಕ್ನಲ್ಲಿ ರ್ಯಾಲಿ ನಡೆಸಿದರು.</p>.<p>ಜಿ.ಪಂ ಮಾಜಿ ಸದಸ್ಯ ಕೊಪ್ಪಶಾಂತಪ್ಪ ಮಾತನಾಡಿ, ಶೋಷಿತ ಸಮುದಾಯಗಳು ಸರ್ಕಾರದ ಮೀಸಲಾತಿ ಸವಲತ್ತುಗಳನ್ನ ಪಡೆಯಬೇಕು ಎಂದರೆ ಒಳಮೀಸಲಾತಿ ಜಾರಿಯಾಗಬೇಕು. ಕಳೆದ ಮೂರು ದಶಕಗಳಿಂದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ನಿರಂತರವಾಗಿ ಹೋರಾಟ ಮಾಡುತ್ತಿವೆ ಎಂದರು.</p>.<p>ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಬಿ.ಕೃಷ್ಣಪ್ಪ ಅವರು ಹಚ್ಚಿದ ಒಳಮೀಸಲಾತಿ ಹೋರಾಟದ ಕಿಚ್ಚು ಸುಪ್ರೀಂಕೋರ್ಟ್ ಆದೇಶದಿಂದ ಫಲಕೊಡುವ ಕಾಲಬಂದಿದೆ ಎಂದರು.</p>.<p>ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕೆಳಮಟ್ಟದ ಸಮುದಾಯಗಳಿಗೆ ಸರ್ಕಾರದ ಮೀಸಲಾತಿ ಹಾಗೂ ಸವಲತ್ತು ಲಭಿಸುತ್ತಿರಲಿಲ್ಲ. ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಶೋಷಿತ ಸಮುದಾಯಗಳಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದು ಅಭಿಪ್ರಾಯಪಟ್ಟರು.</p>.<p>ಮುಖಂಡರಾದ ಪೆದ್ದಿಹಳ್ಳಿ ನರಸಿಂಹಯ್ಯ, ಡಿಎಸ್ಎಸ್ ಸಂಚಾಲಕ ಟಿ.ಕೆ. ಕುಮಾರ್, ಗಾಂಧಿನಗರ ಬಸವರಾಜು, ಬಿಳಿಗೆರೆ ಚಂದ್ರಶೇಖರ್, ಯಗಚಿಕಟ್ಟೆ ರಾಘವೇಂದ್ರ, ಲಿಂಗದೇವರು, ಜಗದೀಶ್, ಅಶೋಕ್ ಗೌಡನಕಟ್ಟೆ, ಈಚನೂರು ಸೇಮಶೇಖರ್, ಕೊಪ್ಪ ಉದಯ್ಕುಮಾರ್, ಗ್ರಾಪಂ ಸದಸ್ಯ ಆನಂದ್ಕುಮಾರ್, ರಮೇಶ್, ಶಿವಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಒಳಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ದಂಡೋರದಿಂದ ನಗರಸಭಾ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ನಗರದ ಬಿ.ಎಚ್ ರಸ್ತೆ ಮೂಲಕ ಅಂಬೇಡ್ಕರ್ ವೃತ್ತ ಹಾಗೂ ಶಿವಕುಮಾರ ಸ್ವಾಮಿಜಿ ವೃತ್ತದವರೆಗೂ ಅಂಬೇಡ್ಕರ್ ಭಾವಚಿತ್ರವಿರುವ ಬಾವುಟ ಹಿಡಿದು ಬೈಕ್ನಲ್ಲಿ ರ್ಯಾಲಿ ನಡೆಸಿದರು.</p>.<p>ಜಿ.ಪಂ ಮಾಜಿ ಸದಸ್ಯ ಕೊಪ್ಪಶಾಂತಪ್ಪ ಮಾತನಾಡಿ, ಶೋಷಿತ ಸಮುದಾಯಗಳು ಸರ್ಕಾರದ ಮೀಸಲಾತಿ ಸವಲತ್ತುಗಳನ್ನ ಪಡೆಯಬೇಕು ಎಂದರೆ ಒಳಮೀಸಲಾತಿ ಜಾರಿಯಾಗಬೇಕು. ಕಳೆದ ಮೂರು ದಶಕಗಳಿಂದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ನಿರಂತರವಾಗಿ ಹೋರಾಟ ಮಾಡುತ್ತಿವೆ ಎಂದರು.</p>.<p>ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ, ಬಿ.ಕೃಷ್ಣಪ್ಪ ಅವರು ಹಚ್ಚಿದ ಒಳಮೀಸಲಾತಿ ಹೋರಾಟದ ಕಿಚ್ಚು ಸುಪ್ರೀಂಕೋರ್ಟ್ ಆದೇಶದಿಂದ ಫಲಕೊಡುವ ಕಾಲಬಂದಿದೆ ಎಂದರು.</p>.<p>ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಕುಪ್ಪಾಳು ರಂಗಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕೆಳಮಟ್ಟದ ಸಮುದಾಯಗಳಿಗೆ ಸರ್ಕಾರದ ಮೀಸಲಾತಿ ಹಾಗೂ ಸವಲತ್ತು ಲಭಿಸುತ್ತಿರಲಿಲ್ಲ. ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಶೋಷಿತ ಸಮುದಾಯಗಳಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದು ಅಭಿಪ್ರಾಯಪಟ್ಟರು.</p>.<p>ಮುಖಂಡರಾದ ಪೆದ್ದಿಹಳ್ಳಿ ನರಸಿಂಹಯ್ಯ, ಡಿಎಸ್ಎಸ್ ಸಂಚಾಲಕ ಟಿ.ಕೆ. ಕುಮಾರ್, ಗಾಂಧಿನಗರ ಬಸವರಾಜು, ಬಿಳಿಗೆರೆ ಚಂದ್ರಶೇಖರ್, ಯಗಚಿಕಟ್ಟೆ ರಾಘವೇಂದ್ರ, ಲಿಂಗದೇವರು, ಜಗದೀಶ್, ಅಶೋಕ್ ಗೌಡನಕಟ್ಟೆ, ಈಚನೂರು ಸೇಮಶೇಖರ್, ಕೊಪ್ಪ ಉದಯ್ಕುಮಾರ್, ಗ್ರಾಪಂ ಸದಸ್ಯ ಆನಂದ್ಕುಮಾರ್, ರಮೇಶ್, ಶಿವಕುಮಾರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>