ಕಾರ್ಯಕ್ರಮದ ಉದ್ಘಾಟಿಸಿದ ಕೆಪಿಟಿಸಿಎಲ್ ಮುಖ್ಯ ಎಂಜಿನಿಯರ್ ಆದಿ ನಾರಾಯಣ್, ಇಂದು ಪರಿಶಿಷ್ಟ ಜಾತಿ ಮತ್ತು ವರ್ಗದ ಸರ್ಕಾರಿ ನೌಕರರು ಬಹಿರಂಗವಾಗಿ ತಮ್ಮ ಜಾತಿ ಹೆಸರು ಹೇಳಲು ಹಿಂಜರಿಯುತ್ತಿದ್ದಾರೆ. ಜಾತಿ ಹೆಸರಿನಲ್ಲಿ ಸಂಘಟಿತರಾಗದಿದ್ದಲ್ಲಿ ಹಲವು ರೀತಿಯಲ್ಲಿ ಹಿನ್ನೆಡೆಗಳನ್ನು ಅನುಭವಿಸಬೇಕಾಗುತ್ತದೆ. ಪೆಟ್ಟು ತಿಂದು ಸುಧಾರಿಸಿಕೊಂಡ ನಂತರವಾದರೂ ನಮ್ಮಲ್ಲಿನ ಭಿನ್ನಾಭಿಪ್ರಾಯ ಮರೆತು ಸಂಘಟಿತರಾಗೋಣ ಎಂದು ಸಲಹೆ ನೀಡಿದರು.