<p><strong>ತುಮಕೂರು:</strong> ಕಳೆದ ಒಂದೂವರೆ ವರ್ಷದಿಂದ ಎಸ್.ಸಿ, ಎಸ್.ಟಿ ಗುತ್ತಿಗೆದಾರರಿಗೆ ಯಾವುದೇ ಕಾಮಗಾರಿ ನೀಡದೆ ಅವರನ್ನು ನಿರುದ್ಯೋಗಿಗಳನ್ನಾಗಿಸಿದೆ ಎಂದು ರಾಜ್ಯ ಎಸ್.ಸಿ, ಎಸ್.ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಆರೋಪಿಸಿದರು.</p>.<p>ನಗರದಲ್ಲಿ ಶುಕ್ರವಾರ ನಡೆದ ಸಂಘದ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ‘ಸರ್ಕಾರ ಈವರೆಗೆ ನೀಡಿರುವ ಎಲ್ಲಾ ಗುತ್ತಿಗೆಗಳು ₹5 ಕೋಟಿ, ₹10 ಕೋಟಿಯ ಪ್ಯಾಕೇಜ್ ಆಗಿವೆ. ಎಸ್.ಸಿ, ಎಸ್.ಟಿ ಗುತ್ತಿಗೆದಾರರಿಗೆ ₹1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ. ಇದರಿಂದ ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ’ ಎಂದು ಅಸಮಾಧಾನ ತೋಡಿಕೊಂಡರು.</p>.<p>ಮೀಸಲಾತಿ ಮೊತ್ತ ₹2 ಕೋಟಿಗೆ ಹೆಚ್ಚಿಸಬೇಕು. ಎಸ್.ಸಿ, ಎಸ್.ಟಿ ಗುತ್ತಿಗೆ ಮೀಸಲು ಕಾಯ್ದೆ ಸಮರ್ಪಕವಾಗಿ ಜಾರಿಗೆ ತರಬೇಕು. ರಾಜ್ಯದಲ್ಲಿ 14,500 ಜನ ಎಸ್.ಸಿ, ಎಸ್.ಟಿ ಗುತ್ತಿಗೆದಾರರು ಇದ್ದಾರೆ. ಅವರಿಗೆ ಸರ್ಕಾರದಿಂದ ಇದುವರೆಗೂ ಸುಮಾರು ₹500 ಕೋಟಿಗೂ ಹೆಚ್ಚು ಹಣ ಬಾಕಿ ಇದೆ. ಸಾಲ ಮಾಡಿ ಕಾಮಗಾರಿ ಮುಗಿಸಿದ್ದಾರೆ. ಕೂಡಲೇ ಬಾಕಿ ಇರುವ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ಎಸ್.ಸಿ, ಎಸ್.ಟಿ ಗುತ್ತಿಗೆದಾರ ಸಂಘದ ಪದಾಧಿಕಾರಿಗಳಾದ ಓಂಪ್ರಕಾಶ್, ಯೋಗೀಶ್, ಹೇಮಕುಮಾರ್, ಗೋವಿಂದರಾಜು, ಲಕ್ಷ್ಮಿನರಸಯ್ಯ, ಎ.ರಂಜನ್, ಎಸ್.ಆರ್.ಚಿಕ್ಕಣ್ಣ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕಳೆದ ಒಂದೂವರೆ ವರ್ಷದಿಂದ ಎಸ್.ಸಿ, ಎಸ್.ಟಿ ಗುತ್ತಿಗೆದಾರರಿಗೆ ಯಾವುದೇ ಕಾಮಗಾರಿ ನೀಡದೆ ಅವರನ್ನು ನಿರುದ್ಯೋಗಿಗಳನ್ನಾಗಿಸಿದೆ ಎಂದು ರಾಜ್ಯ ಎಸ್.ಸಿ, ಎಸ್.ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಆರೋಪಿಸಿದರು.</p>.<p>ನಗರದಲ್ಲಿ ಶುಕ್ರವಾರ ನಡೆದ ಸಂಘದ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ‘ಸರ್ಕಾರ ಈವರೆಗೆ ನೀಡಿರುವ ಎಲ್ಲಾ ಗುತ್ತಿಗೆಗಳು ₹5 ಕೋಟಿ, ₹10 ಕೋಟಿಯ ಪ್ಯಾಕೇಜ್ ಆಗಿವೆ. ಎಸ್.ಸಿ, ಎಸ್.ಟಿ ಗುತ್ತಿಗೆದಾರರಿಗೆ ₹1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ. ಇದರಿಂದ ಈ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ’ ಎಂದು ಅಸಮಾಧಾನ ತೋಡಿಕೊಂಡರು.</p>.<p>ಮೀಸಲಾತಿ ಮೊತ್ತ ₹2 ಕೋಟಿಗೆ ಹೆಚ್ಚಿಸಬೇಕು. ಎಸ್.ಸಿ, ಎಸ್.ಟಿ ಗುತ್ತಿಗೆ ಮೀಸಲು ಕಾಯ್ದೆ ಸಮರ್ಪಕವಾಗಿ ಜಾರಿಗೆ ತರಬೇಕು. ರಾಜ್ಯದಲ್ಲಿ 14,500 ಜನ ಎಸ್.ಸಿ, ಎಸ್.ಟಿ ಗುತ್ತಿಗೆದಾರರು ಇದ್ದಾರೆ. ಅವರಿಗೆ ಸರ್ಕಾರದಿಂದ ಇದುವರೆಗೂ ಸುಮಾರು ₹500 ಕೋಟಿಗೂ ಹೆಚ್ಚು ಹಣ ಬಾಕಿ ಇದೆ. ಸಾಲ ಮಾಡಿ ಕಾಮಗಾರಿ ಮುಗಿಸಿದ್ದಾರೆ. ಕೂಡಲೇ ಬಾಕಿ ಇರುವ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.</p>.<p>ಎಸ್.ಸಿ, ಎಸ್.ಟಿ ಗುತ್ತಿಗೆದಾರ ಸಂಘದ ಪದಾಧಿಕಾರಿಗಳಾದ ಓಂಪ್ರಕಾಶ್, ಯೋಗೀಶ್, ಹೇಮಕುಮಾರ್, ಗೋವಿಂದರಾಜು, ಲಕ್ಷ್ಮಿನರಸಯ್ಯ, ಎ.ರಂಜನ್, ಎಸ್.ಆರ್.ಚಿಕ್ಕಣ್ಣ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>