ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡಲ್ಲ: ಕಾರಜೋಳ

Last Updated 12 ಜೂನ್ 2020, 20:50 IST
ಅಕ್ಷರ ಗಾತ್ರ

ತುಮಕೂರು: ಪರಿಶಿಷ್ಟ ಜಾತಿ ಪಟ್ಟಿಯಿಂದ ಯಾವುದೇ ಜಾತಿಯನ್ನು ಕೈಬಿಡುವುದಿಲ್ಲ. ಕೈ ಬಿಡುವ ವಿಚಾರ ಸರ್ಕಾರದ ಮುಂದೆ ಇಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಶುಕ್ರವಾರ ತಿಳಿಸಿದರು.

ಶಿರಾದಲ್ಲಿ ಮಾತನಾಡಿದ ಅವರು, ‘ಈ ವಿಚಾರದಲ್ಲಿ ಅನಗತ್ಯವಾಗಿ ಗೊಂದಲಗಳು ಉಂಟಾಗಿವೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಇರುವ ಸಮುದಾಯಗಳು ಆತಂಕಗೊಳ್ಳುವ ಅಗತ್ಯ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಪರಿಶಿಷ್ಟ ಜಾತಿ ಪಟ್ಟಿಯಿಂದ ಭೋವಿ, ಲಂಬಾಣಿ, ಕೊರಚ, ಕೊರಮ ಸಮುದಾಯಗಳನ್ನು ಕೈಬಿಡಲಾಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಆ ಸಮುದಾಯಗಳ ಜನರು ಪ್ರತಿಭಟನೆ, ಪತ್ರ ಚಳವಳಿಗಳನ್ನು ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT