<p><strong>ತುಮಕೂರು</strong>: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕೆಲಸ ಮಾಡಬೇಕು. ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸಲಹೆ ಮಾಡಿದರು.</p>.<p>ನಗರದಲ್ಲಿ ಭಾನುವಾರ ಆರ್.ಎಂ.ಆರ್.ಹಳ್ಳಿಕಾರ ಫೌಂಡೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಹಳ್ಳಿಕಾರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಹಳ್ಳಿಕಾರ ಸಮುದಾಯ ಅತ್ಯಂತ ಸಭ್ಯತೆಯಿಂದ ನಡೆದುಕೊಳ್ಳುವ ಸಮುದಾಯ. ಯುವ ಸಮೂಹ ವಿದ್ಯಾವಂತರಾಗಿ ರೂಪುಗೊಳ್ಳಬೇಕು. ಐಎಎಸ್, ಐಪಿಎಸ್ನಂತಹ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು. ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದರು ತಿಳಿಸಿದರು.</p>.<p>ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ಎಲ್ಲರಲ್ಲೂ ಸಮಾನವಾದ ಪ್ರತಿಭೆ, ಬುದ್ಧ ಶಕ್ತಿ ಇರುತ್ತದೆ. ಪ್ರತಿಭೆಯ ಅನಾವರಣಕ್ಕೆ ಅವಕಾಶ ಒದಗಿಸಬೇಕು. ಯುವಕರು ಸಮಾಜದ ಆಸ್ತಿಯಾಗಬೇಕು. ಜೀವನದಲ್ಲಿ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಬೇಕು. ಎಲ್ಲರು ವಿದ್ಯಾವಂತರಾಗಿ ಕುಟುಂಬ, ಸಮಾಜಕ್ಕೆ ಗೌರವ ತರಬೇಕು’ ಎಂದರು.</p>.<p>ಶಾಸಕ ಟಿ.ಬಿ.ಜಯಚಂದ್ರ, ಟ್ರಸ್ಟ್ನ ಅಧ್ಯಕ್ಷ ಎ.ಎಂ.ನಾಗರಾಜ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿ ಕೆಲಸ ಮಾಡಬೇಕು. ಸ್ವಾವಲಂಬಿ ಜೀವನ ಸಾಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸಲಹೆ ಮಾಡಿದರು.</p>.<p>ನಗರದಲ್ಲಿ ಭಾನುವಾರ ಆರ್.ಎಂ.ಆರ್.ಹಳ್ಳಿಕಾರ ಫೌಂಡೇಶನ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಹಳ್ಳಿಕಾರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.</p>.<p>ಹಳ್ಳಿಕಾರ ಸಮುದಾಯ ಅತ್ಯಂತ ಸಭ್ಯತೆಯಿಂದ ನಡೆದುಕೊಳ್ಳುವ ಸಮುದಾಯ. ಯುವ ಸಮೂಹ ವಿದ್ಯಾವಂತರಾಗಿ ರೂಪುಗೊಳ್ಳಬೇಕು. ಐಎಎಸ್, ಐಪಿಎಸ್ನಂತಹ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು. ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬೇಕು ಎಂದರು ತಿಳಿಸಿದರು.</p>.<p>ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ಎಲ್ಲರಲ್ಲೂ ಸಮಾನವಾದ ಪ್ರತಿಭೆ, ಬುದ್ಧ ಶಕ್ತಿ ಇರುತ್ತದೆ. ಪ್ರತಿಭೆಯ ಅನಾವರಣಕ್ಕೆ ಅವಕಾಶ ಒದಗಿಸಬೇಕು. ಯುವಕರು ಸಮಾಜದ ಆಸ್ತಿಯಾಗಬೇಕು. ಜೀವನದಲ್ಲಿ ಉತ್ತಮ ಗುಣಗಳನ್ನು ರೂಢಿಸಿಕೊಳ್ಳಬೇಕು. ಎಲ್ಲರು ವಿದ್ಯಾವಂತರಾಗಿ ಕುಟುಂಬ, ಸಮಾಜಕ್ಕೆ ಗೌರವ ತರಬೇಕು’ ಎಂದರು.</p>.<p>ಶಾಸಕ ಟಿ.ಬಿ.ಜಯಚಂದ್ರ, ಟ್ರಸ್ಟ್ನ ಅಧ್ಯಕ್ಷ ಎ.ಎಂ.ನಾಗರಾಜ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>