ಸಾಕಷ್ಟು ಸಂಖ್ಯೆಯಲ್ಲಿ ಬಗುರ್ ಹುಕುಂ ಸಾಗುವಳಿದಾರರು ಸಕ್ರಮಕ್ಕೆ ಅರ್ಜಿ ಸಲ್ಲಿಸಿಲ್ಲ. ಕಳೆದ ಬಾರಿ ಸಕ್ರಮಕ್ಕೆ ಅನೇಕರು ಅರ್ಜಿ ಸಲ್ಲಿಸಿದ್ದರೂ ಪ್ರಕ್ರಿಯೆ ಪೂರ್ಣ ಆಗಿರಲಿಲ್ಲ. ಅರ್ಜಿ ಸಲ್ಲಿಕೆ ಕಾಲಾವಕಾಶ ವಿಸ್ತರಿಸುವ ಉದ್ದೇಶದಿಂದ ಕಾಯ್ದೆ ತಿದ್ದುಪಡಿಗೆ ಮಸೂದೆ ಮಂಡಿಸಲಾಗಿತ್ತು. ಈಗ ಚುನಾವಣೆ ದಿನಾಂಕ ಪ್ರಕಟಗೊಂಡಿರುವುದರಿಂದ, ಚುನಾವಣೆ ಬಳಿಕ ಸಕ್ರಮಗೊಳಿಸುವ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಮೂಲಗಳು ಹೇಳಿವೆ.