ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿದ ಸುತ್ತೋಲೆ ಮೇರೆಗೆ ರಾಜ್ಯದ ಬಹುತೇಕ ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಶಾಲೆಗಳ ಮುಂಭಾಗ ವಿದ್ಯಾರ್ಥಿಗಳಿಂದ ವಸೂಲಿ ಮಾಡುವ ಶುಲ್ಕದ ವಿವರಗಳನ್ನು ಪ್ರಕಟಿಸಿದ್ದರೂ, ತಾಲ್ಲೂಕಿನ ಕೆಲ ಶಾಲೆಗಳು ಪ್ರಕಟಿಸಿರಲ್ಲಿಲ್ಲ. ಕನ್ನಡ ಪರ ಸಂಘಟನೆಗಳ ಪ್ರತಿಭಟನೆಗೂ ಖಾಸಗಿ ಶಾಲೆಯವರು ಜಗ್ಗದೆ ಶಾಲೆ ಪ್ರಾರಂಭವಾಗುವ ಸಮಯಕ್ಕೆ ಪ್ರಕಟಿಸುವ ಭರವಸೆ ನೀಡಿದ್ದರು.