<p><strong>ತಿಪಟೂರು</strong>: ಕೇಂದ್ರ ಸರ್ಕಾರದ ಪಿಎಂಶ್ರೀ ಯೋಜನೆಯಡಿ ರಾಷ್ಟ್ರದಾದ್ಯಂತ ಜಿಲ್ಲೆಗೊಂದು ಉತ್ತಮ ಶಾಲೆ ಆಯ್ಕೆಯಲ್ಲಿ ತಾಲ್ಲೂಕಿನ ನೊಣವಿನಕೆರೆ ಪಿಎಂಶ್ರೀ ಶಾಲೆ ಉತ್ತಮ ಶಾಲೆಯೆಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದರು. ಶಾಲೆಯ ವಿದ್ಯಾರ್ಥಿಗಳು ದೊಡ್ಡತೆರೆಯಲ್ಲಿ ಇದನ್ನು ವೀಕ್ಷಿಸಿದರು.</p><p>ಉಪನಿರ್ದೇಶಕರ ಕಚೇರಿ ಡಿವೈಪಿಸಿ ಸೌಭಾಗ್ಯಮ್ಮ, ಎಪಿಸಿ ಪ್ರಮೀಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ಹಾಗೂ ಅಕ್ಷರ ದಾಸೋಹ ನಿರ್ದೇಶಕ ಶಿವಶಂಕರ್, ಎಸ್ಡಿಎಂಸಿ ಉಪಾಧ್ಯಕ್ಷ ದೊಡ್ಡರಂಗಪ್ಪ ಹಾಗೂ ಶಾಲಾಭಿವೃದ್ದಿ ಸದಸ್ಯರು, ಪದವೀದರ ಮುಖ್ಯೋಪಾಧ್ಯಯ ಸುರೇಶ್, ಶಿಕ್ಷಕ ವೃಂದ ಭಾಗವಹಿಸಿದ್ದರು.</p><p>ಡಿವೈಎಸ್ಪಿ ಸೌಭಾಗ್ಯಮ್ಮ ಮಾತನಾಡಿ, ಈ ಶಾಲೆಯಲ್ಲಿ ಮಕ್ಕಳು ಆಂಗ್ಲ ಭಾಷೆಯಲ್ಲಿ ಉತ್ತಮವಾಗಿ ಸಂವಹನ ಮಾಡುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದ್ದು, ಇಲ್ಲಿಯ ಕಾರ್ಯಕ್ರಮಗಳು ಮಕ್ಕಳಲ್ಲಿ ಪ್ರತಿಭೆ ಅನಾವರಣಗೊಳಿಸಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದಕ್ಕೆ ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.</p>.<p>ಎಪಿಸಿ ಪ್ರಮೀಳಾ ಮಾತನಾಡಿ, ಈ ಶಾಲೆಯಲ್ಲಿ 750 ವಿದ್ಯಾರ್ಥಿಗಳಿದ್ದರೂ ಇಲ್ಲಿಯ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸಿ ಮಕ್ಕಳಲ್ಲಿ ಉತ್ತಮ ಕಲಿಕೆಯಲ್ಲಿ ತೊಡಗಿದ್ದಾರೆ. ಈ ಶಾಲೆ ಜಿಲ್ಲೆಯ ಉತ್ತಮ ಪಿಎಂಶ್ರೀ ಶಾಲೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ಈ ಶಾಲೆಯ ಪ್ರಗತಿಯ ಸಂಕೇತ ಎಂದು ತಿಳಿಸಿದರು.</p><p>ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ಮಾತನಾಡಿ, ಕಳೆದ 15 ವರ್ಷಗಳಿಂದ ನಿರಂತರವಾಗಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಇಲ್ಲಿ ಅಳವಡಿಸಿಕೊಂಡಿರುವ ಹಲವು ಸೃಜನಾತ್ಮಕ ಚಟುವಟಿಕೆಗಳು ಶಾಲೆಯನ್ನು ಜಿಲ್ಲಾಮಟ್ಟದ ಉತ್ತಮ ಶಾಲೆ ಎಂದು ಆಯ್ಕೆ ಮಾಡುವುದಕ್ಕೆ ಮೂಲ ಕಾರಣಗಳಾಗಿವೆ ಎಂದು ಹೇಳಿದರು.</p><p>ಪದವೀಧರ ಮುಖ್ಯಶಿಕ್ಷಕ ಸುರೇಶ್ ಮಾತನಾಡಿ, ‘ನಮ್ಮ ಶಾಲೆಯ ಎಲ್ಲಾ ಶಿಕ್ಷಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಮಕ್ಕಳ ಏಳಿಗೆಯೇ ನಮ್ಮ ಧ್ಯೇಯ’ ಎಂದರು.</p>.<p>ವಿದ್ಯಾರ್ಥಿಗಳ ಹತ್ತು ಹಲವು ಸ್ಪರ್ಧಾತ್ಮಕ ಚಟುವಟಿಕೆಗಳ ಅನಾವರಣ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ಕೇಂದ್ರ ಸರ್ಕಾರದ ಪಿಎಂಶ್ರೀ ಯೋಜನೆಯಡಿ ರಾಷ್ಟ್ರದಾದ್ಯಂತ ಜಿಲ್ಲೆಗೊಂದು ಉತ್ತಮ ಶಾಲೆ ಆಯ್ಕೆಯಲ್ಲಿ ತಾಲ್ಲೂಕಿನ ನೊಣವಿನಕೆರೆ ಪಿಎಂಶ್ರೀ ಶಾಲೆ ಉತ್ತಮ ಶಾಲೆಯೆಂದು ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದರು. ಶಾಲೆಯ ವಿದ್ಯಾರ್ಥಿಗಳು ದೊಡ್ಡತೆರೆಯಲ್ಲಿ ಇದನ್ನು ವೀಕ್ಷಿಸಿದರು.</p><p>ಉಪನಿರ್ದೇಶಕರ ಕಚೇರಿ ಡಿವೈಪಿಸಿ ಸೌಭಾಗ್ಯಮ್ಮ, ಎಪಿಸಿ ಪ್ರಮೀಳಾ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ಹಾಗೂ ಅಕ್ಷರ ದಾಸೋಹ ನಿರ್ದೇಶಕ ಶಿವಶಂಕರ್, ಎಸ್ಡಿಎಂಸಿ ಉಪಾಧ್ಯಕ್ಷ ದೊಡ್ಡರಂಗಪ್ಪ ಹಾಗೂ ಶಾಲಾಭಿವೃದ್ದಿ ಸದಸ್ಯರು, ಪದವೀದರ ಮುಖ್ಯೋಪಾಧ್ಯಯ ಸುರೇಶ್, ಶಿಕ್ಷಕ ವೃಂದ ಭಾಗವಹಿಸಿದ್ದರು.</p><p>ಡಿವೈಎಸ್ಪಿ ಸೌಭಾಗ್ಯಮ್ಮ ಮಾತನಾಡಿ, ಈ ಶಾಲೆಯಲ್ಲಿ ಮಕ್ಕಳು ಆಂಗ್ಲ ಭಾಷೆಯಲ್ಲಿ ಉತ್ತಮವಾಗಿ ಸಂವಹನ ಮಾಡುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದ್ದು, ಇಲ್ಲಿಯ ಕಾರ್ಯಕ್ರಮಗಳು ಮಕ್ಕಳಲ್ಲಿ ಪ್ರತಿಭೆ ಅನಾವರಣಗೊಳಿಸಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಸುವುದಕ್ಕೆ ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.</p>.<p>ಎಪಿಸಿ ಪ್ರಮೀಳಾ ಮಾತನಾಡಿ, ಈ ಶಾಲೆಯಲ್ಲಿ 750 ವಿದ್ಯಾರ್ಥಿಗಳಿದ್ದರೂ ಇಲ್ಲಿಯ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸಿ ಮಕ್ಕಳಲ್ಲಿ ಉತ್ತಮ ಕಲಿಕೆಯಲ್ಲಿ ತೊಡಗಿದ್ದಾರೆ. ಈ ಶಾಲೆ ಜಿಲ್ಲೆಯ ಉತ್ತಮ ಪಿಎಂಶ್ರೀ ಶಾಲೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿರುವುದು ಈ ಶಾಲೆಯ ಪ್ರಗತಿಯ ಸಂಕೇತ ಎಂದು ತಿಳಿಸಿದರು.</p><p>ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ. ಮಾತನಾಡಿ, ಕಳೆದ 15 ವರ್ಷಗಳಿಂದ ನಿರಂತರವಾಗಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಇಲ್ಲಿ ಅಳವಡಿಸಿಕೊಂಡಿರುವ ಹಲವು ಸೃಜನಾತ್ಮಕ ಚಟುವಟಿಕೆಗಳು ಶಾಲೆಯನ್ನು ಜಿಲ್ಲಾಮಟ್ಟದ ಉತ್ತಮ ಶಾಲೆ ಎಂದು ಆಯ್ಕೆ ಮಾಡುವುದಕ್ಕೆ ಮೂಲ ಕಾರಣಗಳಾಗಿವೆ ಎಂದು ಹೇಳಿದರು.</p><p>ಪದವೀಧರ ಮುಖ್ಯಶಿಕ್ಷಕ ಸುರೇಶ್ ಮಾತನಾಡಿ, ‘ನಮ್ಮ ಶಾಲೆಯ ಎಲ್ಲಾ ಶಿಕ್ಷಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಮಕ್ಕಳ ಏಳಿಗೆಯೇ ನಮ್ಮ ಧ್ಯೇಯ’ ಎಂದರು.</p>.<p>ವಿದ್ಯಾರ್ಥಿಗಳ ಹತ್ತು ಹಲವು ಸ್ಪರ್ಧಾತ್ಮಕ ಚಟುವಟಿಕೆಗಳ ಅನಾವರಣ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>