ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್ ಮಾತನಾಡಿ, ಸೋಮವಾರ ತಾಲ್ಲೂಕಿನ ಅನೇಕ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರ ಸಭೆ ನಡೆಸಿ ಅಗತ್ಯವಿರುವ ಸಲಹೆ ಸೂಚನೆ ನೀಡಲಾಗಿದೆ. ಕಳೆದ ಶೈಕ್ಷಣಿಕ ಸಾಲಿನ ಫಲಿತಾಂಶವನ್ನು ಪರಾಮರ್ಶಿಸಿ ಈ ವರ್ಷ ಇನ್ನೂ ಹೆಚ್ಚಿನ ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ಶ್ರಮ ವಹಿಸಬೇಕು. ದಾಖಲಾತಿ ಹೆಚ್ಚಳ ಮಾಡಲು ಆಂದೋಲನ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.