<p>ಗುಬ್ಬಿ: ಬಿರುಕು ಬಿಟ್ಟಿರುವ ಗೋಡೆ, ಸಿಮೆಂಟ್ ಉದುರುತ್ತಿರುವ ಚಾವಣಿ, ಹಾಳಾಗಿರುವ ಹೆಂಚು, ಮಳೆ ಬಂದರೆ ನೀರು ಜಿನುಗುವ ಗೋಡೆಗಳು ಇದರ ಜೊತೆಗೆ ಮೂಲ ಸೌಕರ್ಯಗಳ ಕೊರತೆಯಿಂದ ತಾಲ್ಲೂಕಿನ ಹಲವು ಸರ್ಕಾರಿ ಶಾಲೆಗಳು ಸೊರಗಿವೆ. ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.</p>.<p>ಸರ್ಕಾರಿ ಶಾಲೆಗಳಿಗೆ ಉಚಿತ ಸಮವಸ್ತ್ರ, ಶೂ, ಪುಸ್ತಕ ಇತ್ಯಾದಿ ಒದಗಿಸುತ್ತಿದ್ದರೂ ಶಿಕ್ಷಕರ ಕೊರತೆ ಹೆಚ್ಚಿದೆ. ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಖಾಸಗಿ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡಬೇಕಿದ್ದ ಸರ್ಕಾರಿ ಶಾಲೆಗಳಲ್ಲಿ ಅನೇಕ ವಿಷಯಗಳ ಬೋಧನೆಗೆ ಶಿಕ್ಷಕರೇ ಇಲ್ಲ. </p>.<p>ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ಆಟದ ಮೈದಾನ ಇಲ್ಲದೆ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯುವಂತಾಗಿದೆ.</p>.<p>ಕೋವಿಡ್ ಸಂದರ್ಭದಲ್ಲಿ ಮುಚ್ಚಿದ್ದ ಅನೇಕ ಶಾಲೆಗಳು ಪುನರಾರಂಭಗೊಂಡಿದ್ದವು. ಆದರೆ ದಿನ ಕಳೆದಂತೆ ಅವುಗಳು ಮುಚ್ಚಿ ಮಕ್ಕಳು ಖಾಸಗಿ ಶಾಲೆಯತ್ತ ಮುಖ ಮಾಡಿದ್ದಾರೆ.</p>.<p>ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಗೆ ಶಿಕ್ಷಕರ ನೇಮಕವಾಗಿ ಹಲವು ವರ್ಷಗಳೇ ಕಳೆದಿವೆ. ಮೇಲ್ದರ್ಜೆಗೆ ಏರಿಸಿರುವ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಪದವೀಧರ ಶಿಕ್ಷಕರನ್ನು ನೇಮಿಸಿಕೊಂಡಿದ್ದರೂ ಹಲವೆಡೆ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಶಿಕ್ಷಕರು ಇಲ್ಲ.</p>.<p>ಬಹುತೇಕ ಶಿಕ್ಷಕರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಬರಲು ಹಿಂದೇಟು ಹಾಕುವ ಜೊತೆಗೆ ಬರುತ್ತಿರುವ ಶಿಕ್ಷಕರಲ್ಲಿ ಹಲವರು ಪರಿಣಾಮಕಾರಿ ಬೋಧನೆಗೆ ಗಮನಹರಿಸದೆ ಕಾರಣ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಹಿಂಜರಿಯುತ್ತಿದ್ದೇವೆ ಎಂದು ಅನೇಕ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ ಕೊಠಡಿಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿದ್ದ ವಿವೇಕ ಶಾಲಾ ಕೊಠಡಿ ಯೋಜನೆ ನನೆಗುದಿಗೆ ಬಿದ್ದಿದೆ. ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>ತಾಲ್ಲೂಕಿನಲ್ಲಿ 398 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. 1,573 ಕೊಠಡಿಗಳಿದ್ದು, 1,096 ಸುಸ್ಥಿತಿಯಲ್ಲಿವೆ. 318 ಕೊಠಡಿಗಳಿಗೆ ಸಣ್ಣಪುಟ್ಟ ದುರಸ್ತಿಯ ಅಗತ್ಯವಿದೆ. 159 ಕೊಠಡಿಗಳನ್ನು ಸಂಪೂರ್ಣವಾಗಿ ಕೆಡವಿ ಹೊಸದಾಗಿ ನಿರ್ಮಿಸಬೇಕಿದೆ. ತುರ್ತಾಗಿ 13 ಕೊಠಡಿಗಳನ್ನು ಈ ಶೈಕ್ಷಣಿಕ ವರ್ಷದಲ್ಲೇ ದುರಸ್ತಿ ಮಾಡಿದರೆ ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗಲಿದೆ.</p>.<p>ತಾಲ್ಲೂಕಿನ ಎನ್.ನಂದಿಹಳ್ಳಿ ವರಹಸಂದ್ರ, ಮಾರನಹಳ್ಳಿ, ದೊಡ್ಡಹೆಡಗನಹಳ್ಳಿ, ಮಾದನಹಳ್ಳಿ, ಎಳೆದಾಸನಹಳ್ಳಿ ಸೇರಿದಂತೆ ಹಲವೆಡೆ ಕೊಠಡಿಗಳು ಸಂಪೂರ್ಣ ಹಾಳಾಗಿರುವುದರಿಂದ ತುರ್ತು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.</p>.<p>ತಾಲ್ಲೂಕಿನಲ್ಲಿ ಶತಮಾನ ದಾಟಿರುವ ಅನೇಕ ಸರ್ಕಾರಿ ಶಾಲೆಗಳಿವೆ. ಅವುಗಳನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳದಿರುವುದು ದುರಾದೃಷ್ಟಕರ ಎಂದು ನಿವೃತ್ತ ಶಿಕ್ಷಕ ಜಯಣ್ಣ ಬೇಸರ ವ್ಯಕ್ತಪಡಿಸಿದರು.</p>.<p>Quote - ಸರ್ಕಾರಿ ಶಾಲೆಗಳ ಗುಣಮಟ್ಟ ಕಡಿಮೆಯಾಗದಂತೆ ನಿರ್ವಹಿಸಬೇಕಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಬದ್ಧತೆ ತೋರುತ್ತಿಲ್ಲ. ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳೆಂದರೆ ಕೇವಲ ಬಡ ವರ್ಗದವರಿಗೆ ಮಾತ್ರ ಸೀಮಿತ ಎನ್ನುವಂತಾಗಿದೆ. ಕುಮಾರಸ್ವಾಮಿ ಪೋಷಕ</p>.<p>Quote - ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ಮಾತ್ರ ಭವಿಷ್ಯದಲ್ಲಿ ಮಕ್ಕಳು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂಬ ಕಲ್ಪನೆ ಪೋಷಕರಲ್ಲಿ ಇದೆ. ಸಾಧ್ಯವಿರುವೆಡೆ ಆಂಗ್ಲ ಮಾಧ್ಯಮ ತೆರೆದರೆ ಸರ್ಕಾರಿ ಶಾಲೆಗಳು ಪುನಶ್ಚೇತನ ಸಾಧ್ಯ. ಗುರುಪ್ರಸಾದ್ ಎಸ್ಡಿಎಂಸಿ ಅಧ್ಯಕ್ಷ </p>.<p>Quote - ತಾಲ್ಲೂಕಿನ ಹಲವೆಡೆ ಸರ್ಕಾರಿ ಶಾಲೆ ಕೊಠಡಿಗಳು ದುರಸ್ತಿಯಾಗಬೇಕಿದೆ. ಶಿಕ್ಷಣ ಇಲಾಖೆ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಕಾರ ಪಡೆದು ದುರಸ್ತಿಗೆ ಮುಂದಾದಲ್ಲಿ ಸಹಕಾರ ನೀಡುತ್ತೇವೆ. ರಾಜಶೇಖರ್ ಗ್ರಾಮ ಪಂಚಾಯಿತಿ ಸದಸ್ಯ </p>.<p>Quote - ಶಿಥಿಲಾವಸ್ಥೆ ತಲುಪಿರುವ ಕೊಠಡಿಗಳನ್ನು ಆದ್ಯತೆ ಮೇರೆಗೆ ದುರಸ್ತಿ ಮಾಡಲಾಗುತ್ತಿದೆ. ನರೇಗಾ ಯೋಜನೆ ಬಳಸಿಕೊಂಡು ಅನೇಕ ಕಡೆ ಶಾಲೆ ಕೊಠಡಿ ಹಾಗೂ ಕಾಂಪೌಂಡ್ ದುರಸ್ತಿ ಮಾಡಲಾಗಿದೆ. ತುರ್ತುಕ್ರಮ ಕೈಗೊಂಡು ಕೊಠಡಿ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಲೇಪಾಕ್ಷಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ </p>.<p>Cut-off box - ದುರಸ್ತಿಗೆ ಕಾದಿವೆ 143 ಕೊಠಡಿ ತಾಲ್ಲೂಕಿನಲ್ಲಿ 373 ಪ್ರಾಥಮಿಕ ಶಾಲೆಗಳ 1263 ಕೊಠಡಿಗಳು ಸುಸ್ಥಿತಿಯಲ್ಲಿವೆ. 143 ಕೊಠಡಿಗಳು ದುರಸ್ತಿಯಾಗಬೇಕಿದೆ. ಒಟ್ಟು 25 ಸರ್ಕಾರಿ ಪ್ರೌಢಶಾಲೆಗಳಲ್ಲಿ 150 ಕೊಠಡಿಗಳು ಸುಸ್ಥಿತಿಯಲ್ಲಿವೆ. 29 ಕೊಠಡಿಗಳು ದುರಸ್ತಿಯಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಬ್ಬಿ: ಬಿರುಕು ಬಿಟ್ಟಿರುವ ಗೋಡೆ, ಸಿಮೆಂಟ್ ಉದುರುತ್ತಿರುವ ಚಾವಣಿ, ಹಾಳಾಗಿರುವ ಹೆಂಚು, ಮಳೆ ಬಂದರೆ ನೀರು ಜಿನುಗುವ ಗೋಡೆಗಳು ಇದರ ಜೊತೆಗೆ ಮೂಲ ಸೌಕರ್ಯಗಳ ಕೊರತೆಯಿಂದ ತಾಲ್ಲೂಕಿನ ಹಲವು ಸರ್ಕಾರಿ ಶಾಲೆಗಳು ಸೊರಗಿವೆ. ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.</p>.<p>ಸರ್ಕಾರಿ ಶಾಲೆಗಳಿಗೆ ಉಚಿತ ಸಮವಸ್ತ್ರ, ಶೂ, ಪುಸ್ತಕ ಇತ್ಯಾದಿ ಒದಗಿಸುತ್ತಿದ್ದರೂ ಶಿಕ್ಷಕರ ಕೊರತೆ ಹೆಚ್ಚಿದೆ. ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಖಾಸಗಿ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡಬೇಕಿದ್ದ ಸರ್ಕಾರಿ ಶಾಲೆಗಳಲ್ಲಿ ಅನೇಕ ವಿಷಯಗಳ ಬೋಧನೆಗೆ ಶಿಕ್ಷಕರೇ ಇಲ್ಲ. </p>.<p>ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಇಂದಿಗೂ ಆಟದ ಮೈದಾನ ಇಲ್ಲದೆ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯುವಂತಾಗಿದೆ.</p>.<p>ಕೋವಿಡ್ ಸಂದರ್ಭದಲ್ಲಿ ಮುಚ್ಚಿದ್ದ ಅನೇಕ ಶಾಲೆಗಳು ಪುನರಾರಂಭಗೊಂಡಿದ್ದವು. ಆದರೆ ದಿನ ಕಳೆದಂತೆ ಅವುಗಳು ಮುಚ್ಚಿ ಮಕ್ಕಳು ಖಾಸಗಿ ಶಾಲೆಯತ್ತ ಮುಖ ಮಾಡಿದ್ದಾರೆ.</p>.<p>ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಗೆ ಶಿಕ್ಷಕರ ನೇಮಕವಾಗಿ ಹಲವು ವರ್ಷಗಳೇ ಕಳೆದಿವೆ. ಮೇಲ್ದರ್ಜೆಗೆ ಏರಿಸಿರುವ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಾತ್ರ ಪದವೀಧರ ಶಿಕ್ಷಕರನ್ನು ನೇಮಿಸಿಕೊಂಡಿದ್ದರೂ ಹಲವೆಡೆ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಶಿಕ್ಷಕರು ಇಲ್ಲ.</p>.<p>ಬಹುತೇಕ ಶಿಕ್ಷಕರು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಬರಲು ಹಿಂದೇಟು ಹಾಕುವ ಜೊತೆಗೆ ಬರುತ್ತಿರುವ ಶಿಕ್ಷಕರಲ್ಲಿ ಹಲವರು ಪರಿಣಾಮಕಾರಿ ಬೋಧನೆಗೆ ಗಮನಹರಿಸದೆ ಕಾರಣ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಹಿಂಜರಿಯುತ್ತಿದ್ದೇವೆ ಎಂದು ಅನೇಕ ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ ಕೊಠಡಿಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿದ್ದ ವಿವೇಕ ಶಾಲಾ ಕೊಠಡಿ ಯೋಜನೆ ನನೆಗುದಿಗೆ ಬಿದ್ದಿದೆ. ಸರ್ಕಾರಿ ಶಾಲೆಗಳ ಬಗ್ಗೆ ಸರ್ಕಾರ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.</p>.<p>ತಾಲ್ಲೂಕಿನಲ್ಲಿ 398 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿವೆ. 1,573 ಕೊಠಡಿಗಳಿದ್ದು, 1,096 ಸುಸ್ಥಿತಿಯಲ್ಲಿವೆ. 318 ಕೊಠಡಿಗಳಿಗೆ ಸಣ್ಣಪುಟ್ಟ ದುರಸ್ತಿಯ ಅಗತ್ಯವಿದೆ. 159 ಕೊಠಡಿಗಳನ್ನು ಸಂಪೂರ್ಣವಾಗಿ ಕೆಡವಿ ಹೊಸದಾಗಿ ನಿರ್ಮಿಸಬೇಕಿದೆ. ತುರ್ತಾಗಿ 13 ಕೊಠಡಿಗಳನ್ನು ಈ ಶೈಕ್ಷಣಿಕ ವರ್ಷದಲ್ಲೇ ದುರಸ್ತಿ ಮಾಡಿದರೆ ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗಲಿದೆ.</p>.<p>ತಾಲ್ಲೂಕಿನ ಎನ್.ನಂದಿಹಳ್ಳಿ ವರಹಸಂದ್ರ, ಮಾರನಹಳ್ಳಿ, ದೊಡ್ಡಹೆಡಗನಹಳ್ಳಿ, ಮಾದನಹಳ್ಳಿ, ಎಳೆದಾಸನಹಳ್ಳಿ ಸೇರಿದಂತೆ ಹಲವೆಡೆ ಕೊಠಡಿಗಳು ಸಂಪೂರ್ಣ ಹಾಳಾಗಿರುವುದರಿಂದ ತುರ್ತು ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.</p>.<p>ತಾಲ್ಲೂಕಿನಲ್ಲಿ ಶತಮಾನ ದಾಟಿರುವ ಅನೇಕ ಸರ್ಕಾರಿ ಶಾಲೆಗಳಿವೆ. ಅವುಗಳನ್ನು ಪುನಶ್ಚೇತನಗೊಳಿಸಲು ಕ್ರಮ ಕೈಗೊಳ್ಳದಿರುವುದು ದುರಾದೃಷ್ಟಕರ ಎಂದು ನಿವೃತ್ತ ಶಿಕ್ಷಕ ಜಯಣ್ಣ ಬೇಸರ ವ್ಯಕ್ತಪಡಿಸಿದರು.</p>.<p>Quote - ಸರ್ಕಾರಿ ಶಾಲೆಗಳ ಗುಣಮಟ್ಟ ಕಡಿಮೆಯಾಗದಂತೆ ನಿರ್ವಹಿಸಬೇಕಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರು ಬದ್ಧತೆ ತೋರುತ್ತಿಲ್ಲ. ಮೂಲ ಸೌಕರ್ಯಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳೆಂದರೆ ಕೇವಲ ಬಡ ವರ್ಗದವರಿಗೆ ಮಾತ್ರ ಸೀಮಿತ ಎನ್ನುವಂತಾಗಿದೆ. ಕುಮಾರಸ್ವಾಮಿ ಪೋಷಕ</p>.<p>Quote - ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ಮಾತ್ರ ಭವಿಷ್ಯದಲ್ಲಿ ಮಕ್ಕಳು ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂಬ ಕಲ್ಪನೆ ಪೋಷಕರಲ್ಲಿ ಇದೆ. ಸಾಧ್ಯವಿರುವೆಡೆ ಆಂಗ್ಲ ಮಾಧ್ಯಮ ತೆರೆದರೆ ಸರ್ಕಾರಿ ಶಾಲೆಗಳು ಪುನಶ್ಚೇತನ ಸಾಧ್ಯ. ಗುರುಪ್ರಸಾದ್ ಎಸ್ಡಿಎಂಸಿ ಅಧ್ಯಕ್ಷ </p>.<p>Quote - ತಾಲ್ಲೂಕಿನ ಹಲವೆಡೆ ಸರ್ಕಾರಿ ಶಾಲೆ ಕೊಠಡಿಗಳು ದುರಸ್ತಿಯಾಗಬೇಕಿದೆ. ಶಿಕ್ಷಣ ಇಲಾಖೆ ಸ್ಥಳೀಯ ಗ್ರಾಮ ಪಂಚಾಯಿತಿ ಹಾಗೂ ಹಳೆಯ ವಿದ್ಯಾರ್ಥಿಗಳ ಸಹಕಾರ ಪಡೆದು ದುರಸ್ತಿಗೆ ಮುಂದಾದಲ್ಲಿ ಸಹಕಾರ ನೀಡುತ್ತೇವೆ. ರಾಜಶೇಖರ್ ಗ್ರಾಮ ಪಂಚಾಯಿತಿ ಸದಸ್ಯ </p>.<p>Quote - ಶಿಥಿಲಾವಸ್ಥೆ ತಲುಪಿರುವ ಕೊಠಡಿಗಳನ್ನು ಆದ್ಯತೆ ಮೇರೆಗೆ ದುರಸ್ತಿ ಮಾಡಲಾಗುತ್ತಿದೆ. ನರೇಗಾ ಯೋಜನೆ ಬಳಸಿಕೊಂಡು ಅನೇಕ ಕಡೆ ಶಾಲೆ ಕೊಠಡಿ ಹಾಗೂ ಕಾಂಪೌಂಡ್ ದುರಸ್ತಿ ಮಾಡಲಾಗಿದೆ. ತುರ್ತುಕ್ರಮ ಕೈಗೊಂಡು ಕೊಠಡಿ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಲೇಪಾಕ್ಷಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ </p>.<p>Cut-off box - ದುರಸ್ತಿಗೆ ಕಾದಿವೆ 143 ಕೊಠಡಿ ತಾಲ್ಲೂಕಿನಲ್ಲಿ 373 ಪ್ರಾಥಮಿಕ ಶಾಲೆಗಳ 1263 ಕೊಠಡಿಗಳು ಸುಸ್ಥಿತಿಯಲ್ಲಿವೆ. 143 ಕೊಠಡಿಗಳು ದುರಸ್ತಿಯಾಗಬೇಕಿದೆ. ಒಟ್ಟು 25 ಸರ್ಕಾರಿ ಪ್ರೌಢಶಾಲೆಗಳಲ್ಲಿ 150 ಕೊಠಡಿಗಳು ಸುಸ್ಥಿತಿಯಲ್ಲಿವೆ. 29 ಕೊಠಡಿಗಳು ದುರಸ್ತಿಯಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>