<p><strong>ಶಿರಾ</strong>: ತಾಲ್ಲೂಕಿನ ಸೀಗಲಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಮನೆ ಮನೆಗೆ ಗಂಗೆ (ಜೆಜೆಎಂ) ಯೋಜನೆ ಅನುಷ್ಠಾನಕ್ಕೆ ಗ್ರಾಮಸ್ಥರು ಅಸಮ್ಮತಿ ಸೂಚಿಸಿ, ಕಾಮಗಾರಿ ನಡೆಸದಂತೆ ಪಟ್ಟು ಹಿಡಿದಿದ ಕಾರಣ ಯೋಜನೆ ಅನುಷ್ಠಾನ ಕೈಬಿಡಲು ತೀರ್ಮಾನಿಸಲಾಯಿತು.</p>.<p>ಸೀಗಲಹಳ್ಳಿ ಗ್ರಾಮದ ಗಣೇಶ ದೇವಸ್ಥಾನದ ಬಳಿ ಗುರುವಾರ ನಾದೂರು ಗ್ರಾ.ಪಂ. ಅಧ್ಯಕ್ಷೆ ತುಳಸಿ ಮಧುಸೂದನ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ ಯೋಜನೆ ಜಾರಿಯಾಗುತ್ತಿದ್ದು, ಪ್ರತಿಯೊಂದು ಮನೆಗೆ ನೀರು ಕೊಡುವುದು ಸರ್ಕಾರದ ಉದ್ದೇಶ. ಕಾಮಗಾರಿಗೆ ಅವಕಾಶ ಮಾಡಿಕೊಡುವಂತೆ ಅಧಿಕಾರಿಗಳು ಮನವಿ ಮಾಡಿದರು.</p>.<p>ಗ್ರಾ.ಪಂ ಸದಸ್ಯ ಅಶೋಕ ಮಾತನಾಡಿ, ಯೋಜನೆಯು ಯಶಸ್ವಿಯಾದ ಉದಾಹರಣೆ ಕಡಿಮೆ ಇದ್ದು, ನಮ್ಮ ಊರಿನಲ್ಲಿ ಯಾವುದೇ ಕಾರಣಕ್ಕೂ ಜೆಜೆಎಂ ಕಾಮಗಾರಿ ಅನುಷ್ಠಾನ ಬೇಡ ಎಂದರು.</p>.<p>ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್ ಸಣ್ಣಚಿತ್ತಯ್ಯ ಮಾತನಾಡಿ, ಗ್ರಾಮದಲ್ಲಿ ₹46.80ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಿದ್ದು ಗ್ರಾಮಸ್ಥರು ಯೋಜನೆಯೇ ಬೇಡ ಎಂದರೆ ಮತ್ತೆ ಅನುದಾನ ಲಭ್ಯವಾಗುದಿಲ್ಲ ಎಂದು ಸಭೆಯ ಗಮನಕ್ಕೆ ತಂದರು.</p>.<p>ಗ್ರಾ.ಪಂ.ಸದಸ್ಯೆ ಸುನಂದಮ್ಮ, ಗಂಗಣ್ಣ, ಮಾಜಿ ಸದಸ್ಯರಾದ ಶಂಕರಪ್ಪ, ತಿಪ್ಪೇಸ್ವಾಮಿ, ಕೃಷ್ಣಪ್ಪ, ಮಂಜುನಾಥ್, ಲಚ್ಚಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ತಾಲ್ಲೂಕಿನ ಸೀಗಲಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಮನೆ ಮನೆಗೆ ಗಂಗೆ (ಜೆಜೆಎಂ) ಯೋಜನೆ ಅನುಷ್ಠಾನಕ್ಕೆ ಗ್ರಾಮಸ್ಥರು ಅಸಮ್ಮತಿ ಸೂಚಿಸಿ, ಕಾಮಗಾರಿ ನಡೆಸದಂತೆ ಪಟ್ಟು ಹಿಡಿದಿದ ಕಾರಣ ಯೋಜನೆ ಅನುಷ್ಠಾನ ಕೈಬಿಡಲು ತೀರ್ಮಾನಿಸಲಾಯಿತು.</p>.<p>ಸೀಗಲಹಳ್ಳಿ ಗ್ರಾಮದ ಗಣೇಶ ದೇವಸ್ಥಾನದ ಬಳಿ ಗುರುವಾರ ನಾದೂರು ಗ್ರಾ.ಪಂ. ಅಧ್ಯಕ್ಷೆ ತುಳಸಿ ಮಧುಸೂದನ್ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ತೀವ್ರ ವಿರೋಧ ವ್ಯಕ್ತವಾಯಿತು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಡಿಯಲ್ಲಿ ಯೋಜನೆ ಜಾರಿಯಾಗುತ್ತಿದ್ದು, ಪ್ರತಿಯೊಂದು ಮನೆಗೆ ನೀರು ಕೊಡುವುದು ಸರ್ಕಾರದ ಉದ್ದೇಶ. ಕಾಮಗಾರಿಗೆ ಅವಕಾಶ ಮಾಡಿಕೊಡುವಂತೆ ಅಧಿಕಾರಿಗಳು ಮನವಿ ಮಾಡಿದರು.</p>.<p>ಗ್ರಾ.ಪಂ ಸದಸ್ಯ ಅಶೋಕ ಮಾತನಾಡಿ, ಯೋಜನೆಯು ಯಶಸ್ವಿಯಾದ ಉದಾಹರಣೆ ಕಡಿಮೆ ಇದ್ದು, ನಮ್ಮ ಊರಿನಲ್ಲಿ ಯಾವುದೇ ಕಾರಣಕ್ಕೂ ಜೆಜೆಎಂ ಕಾಮಗಾರಿ ಅನುಷ್ಠಾನ ಬೇಡ ಎಂದರು.</p>.<p>ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಂಜಿನಿಯರ್ ಸಣ್ಣಚಿತ್ತಯ್ಯ ಮಾತನಾಡಿ, ಗ್ರಾಮದಲ್ಲಿ ₹46.80ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಿದ್ದು ಗ್ರಾಮಸ್ಥರು ಯೋಜನೆಯೇ ಬೇಡ ಎಂದರೆ ಮತ್ತೆ ಅನುದಾನ ಲಭ್ಯವಾಗುದಿಲ್ಲ ಎಂದು ಸಭೆಯ ಗಮನಕ್ಕೆ ತಂದರು.</p>.<p>ಗ್ರಾ.ಪಂ.ಸದಸ್ಯೆ ಸುನಂದಮ್ಮ, ಗಂಗಣ್ಣ, ಮಾಜಿ ಸದಸ್ಯರಾದ ಶಂಕರಪ್ಪ, ತಿಪ್ಪೇಸ್ವಾಮಿ, ಕೃಷ್ಣಪ್ಪ, ಮಂಜುನಾಥ್, ಲಚ್ಚಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>