ಹೆಬ್ಬೂರು ಹೋಬಳಿಯ ದೊಡ್ಡಗೊಲ್ಲಹಳ್ಳಿಯಲ್ಲಿ ರಸ್ತೆ ಬದಿ ನಿಂತಿದ್ದ ವೆಂಕಟೇಶಪ್ಪ (49) ಎಂಬುವರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೃಷ್ಣಮೂರ್ತಿ, ಮಗ ಅನಿಲ್ಕುಮಾರ್ ಹೆಬ್ಬೂರಿನಿಂದ ಚೀರನಹಳ್ಳಿಗೆ ಹೋಗುತ್ತಿದ್ದರು. ದೊಡ್ಡಗೊಲ್ಲಹಳ್ಳಿ ಬಳಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿ ನಿಂತಿದ್ದ ವೆಂಕಟೇಶಪ್ಪ ಅವರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಅನಿಲ್ಕುಮಾರ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.