ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತ್ಯೇಕ ಅಪಘಾತ: ಇಬ್ಬರು ಸಾವು

Published 4 ಮಾರ್ಚ್ 2024, 4:39 IST
Last Updated 4 ಮಾರ್ಚ್ 2024, 4:39 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಊರ್ಡಿಗೆರೆಯಲ್ಲಿ ರಸ್ತೆ ದಾಟುತ್ತಿದ್ದ ಗಂಗಮ್ಮ (75) ಎಂಬುವರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಗಮ್ಮ ಊರ್ಡಿಗೆರೆಯ ನಿವಾಸಿ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬೂರು ಹೋಬಳಿಯ ದೊಡ್ಡಗೊಲ್ಲಹಳ್ಳಿಯಲ್ಲಿ ರಸ್ತೆ ಬದಿ ನಿಂತಿದ್ದ ವೆಂಕಟೇಶಪ್ಪ (49) ಎಂಬುವರಿಗೆ ಬೈಕ್‌ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೃಷ್ಣಮೂರ್ತಿ, ಮಗ ಅನಿಲ್‌ಕುಮಾರ್‌ ಹೆಬ್ಬೂರಿನಿಂದ ಚೀರನಹಳ್ಳಿಗೆ ಹೋಗುತ್ತಿದ್ದರು. ದೊಡ್ಡಗೊಲ್ಲಹಳ್ಳಿ ಬಳಿ ನಿಯಂತ್ರಣ ತಪ್ಪಿದ ಬೈಕ್‌ ರಸ್ತೆ ಬದಿ ನಿಂತಿದ್ದ ವೆಂಕಟೇಶಪ್ಪ ಅವರಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಅನಿಲ್‌ಕುಮಾರ್‌ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT