ತನಿಖೆಯ ನಂತರ ವ್ಯಕ್ತಿಯನ್ನು ಅರಸೀಕೆರೆ ತಾಲ್ಲೂಕು ಕಣಕಟ್ಟೆ ಹೋಬಳಿ ಹೊಳಲಕೆರೆ ಕುಮಾರ (49) ಎಂದು ಗುರುತಿಸಲಾಗಿತ್ತು. ಜೂಜಾಟದಲ್ಲಿ ಉಂಟಾದ ಜಗಳದಿಂದಾಗಿ ಆತನ ಜತೆಗೆ ಕೂಲಿ ಕೆಲಸ ಮಾಡುತ್ತಿದ್ದ 6 ಮಂದಿ ಈತನ ಕೊಲೆ ಮಾಡಿದ್ದರು. ಕೊಲೆ ಆರೋಪಿಗಳಾದ ಸುಬ್ರಮಣ್ಯ, ವೆಂಕಟೇಶ್, ಕುಳ್ಳ ಮಂಜುನಾಥ್ ಎಂಬುವರನ್ನು ಬಂಧಿಸಿದ್ದು, ಉಳಿದವರ ಪತ್ತೆಗೆ ಬಲೆ ಬೀಸಿದ್ದಾರೆ.