ಚುನಾವಣೆ ಸಂದರ್ಭದಲ್ಲಿ ಮಾತ್ರ ತಿಗಳ ಜನಾಂಗವನ್ನು ನೆನಪಿಸಿಕೊಳ್ಳುವ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ಮೀಸಲಾತಿ, ಸರ್ಕಾರಿ ಸೌಲಭ್ಯ ನೀಡಲು ಹಿಂದೆ ಸರಿಯುತ್ತಿವೆ. ರಾಜಕೀಯ ಅಧಿಕಾರ ಇಲ್ಲದಿರುವುದೇ ಸಮುದಾಯ ಹಿಂದುಳಿಯಲು ಕಾರಣವಾಗಿದೆ. ರಾಜ್ಯದಲ್ಲಿ 40 ಲಕ್ಷ ಜನಸಂಖ್ಯೆ ಇರುವ ತಿಗಳ ಸಮುದಾಯಕ್ಕೆ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.