<p>ತುಮಕೂರು: ಯುವಕರನ್ನು ಸಂಘಟಿಸಿ ದೇಶ ಸೇವೆಗೆ ಅಣಿಗೊಳಿಸುವಂತಹ ವಾತಾವರಣ ಸೃಷ್ಟಿ ಆಗಬೇಕು ಎಂದು ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮ್ಮದ್ ತಿಳಿಸಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಭಾನುವಾರ ‘ಸೇವಾದಳ ಯುವ ಬ್ರಿಗೇಡ್’ ಜಿಲ್ಲಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸ್ವಾತಂತ್ರ್ಯ ಸಂಗ್ರಾಮದ ವೇಳೆ ಅಹಿಂಸಾತ್ಮಕ ಚಳವಳಿ ಮೂಲಕ ಸೇವಾದಳ ಪ್ರಾರಂಭವಾಯಿತು. ಸೇವಾ ಮನೋಭಾವ ರೂಢಿಸಿಕೊಳ್ಳುವಂತೆ ಮಾಡುವುದೇ ದಳದ ಮುಖ್ಯ ಉದ್ದೇಶ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ಯಾವುದೇ ಚುನಾವಣೆ ಭರವಸೆ ಈಡೇರಿಸಿಲ್ಲ. ಕಳೆದ ಐದಾರು ತಿಂಗಳಿನಿಂದ 13 ಕೋಟಿಗೂ ಹೆಚ್ಚು ಜನರು ದೇಶದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಕನಿಷ್ಠ ಅವರಿಗೆ ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಪ್ರಧಾನಿ ವಿಫಲ ಆಗಿದ್ದಾರೆ ಎಂದು ಆರೋಪಿಸಿದರು.</p>.<p>ಸೇವಾದಳದ ರಾಷ್ಟ್ರೀಯ ಸಂಚಾಲಕ ಕಿರಣ್ ಮೋರಸ್ ಮಾತನಾಡಿ, ಜನರಲ್ಲಿ ಸೇವಾ ಮನೋಭಾವ, ರಾಷ್ಟ್ರೀಯ ಮನೋಭಾವ ಕಡಿಮೆ ಆಗುತ್ತಿದೆ. ಸೇವಾದಳ ಘಟಕವು ಯುವಕರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ಸಹಕಾರ ಭಾವ ಮೂಡಿಸುವ ಮೂಲಕ ಅವರಲ್ಲಿ ರಾಷ್ಟ್ರಪ್ರೇಮ ಮೂಡಿಸಬೇಕು ಎಂದು ಹೇಳಿದರು.</p>.<p>ಸೇವಾದಳ ಯುವ ಬ್ರಿಗೇಡ್ ರಾಜ್ಯ ಘಟಕದ ಅಧ್ಯಕ್ಷ ಪಿ.ಕೆ.ಜುನೈದ್, ಸೇವಾ ಮನೋಭಾವದಿಂದ ಎಲ್ಲರೂ ಕೆಲಸ ಮಾಡಲು ಮುಂದಾಗಬೇಕು. ಸೇವಾದಳವು ನಿಸ್ವಾರ್ಥ ಸೇವಾ ಸಂಘಟನೆ ಆಗಿದೆ ಎಂದು ಹೇಳಿದರು.</p>.<p>ನಿಖಿತ್ ರಾಜ್ ಮೌರ್ಯ ಮಾತನಾಡಿ, ಜಾತಿ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯತೆಯನ್ನು ಮೂಡಿಸಬೇಕು ಎಂದು ಹೇಳಿದರು.</p>.<p>ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್, ಸೇವಾದಳ ಯುವ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ಮಧು, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗುರುಪ್ರಸಾದ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈನ್ ಶೇಖ್ ಫಯಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಯುವಕರನ್ನು ಸಂಘಟಿಸಿ ದೇಶ ಸೇವೆಗೆ ಅಣಿಗೊಳಿಸುವಂತಹ ವಾತಾವರಣ ಸೃಷ್ಟಿ ಆಗಬೇಕು ಎಂದು ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮ್ಮದ್ ತಿಳಿಸಿದರು.</p>.<p>ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಭಾನುವಾರ ‘ಸೇವಾದಳ ಯುವ ಬ್ರಿಗೇಡ್’ ಜಿಲ್ಲಾ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸ್ವಾತಂತ್ರ್ಯ ಸಂಗ್ರಾಮದ ವೇಳೆ ಅಹಿಂಸಾತ್ಮಕ ಚಳವಳಿ ಮೂಲಕ ಸೇವಾದಳ ಪ್ರಾರಂಭವಾಯಿತು. ಸೇವಾ ಮನೋಭಾವ ರೂಢಿಸಿಕೊಳ್ಳುವಂತೆ ಮಾಡುವುದೇ ದಳದ ಮುಖ್ಯ ಉದ್ದೇಶ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ಯಾವುದೇ ಚುನಾವಣೆ ಭರವಸೆ ಈಡೇರಿಸಿಲ್ಲ. ಕಳೆದ ಐದಾರು ತಿಂಗಳಿನಿಂದ 13 ಕೋಟಿಗೂ ಹೆಚ್ಚು ಜನರು ದೇಶದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ. ಕನಿಷ್ಠ ಅವರಿಗೆ ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಪ್ರಧಾನಿ ವಿಫಲ ಆಗಿದ್ದಾರೆ ಎಂದು ಆರೋಪಿಸಿದರು.</p>.<p>ಸೇವಾದಳದ ರಾಷ್ಟ್ರೀಯ ಸಂಚಾಲಕ ಕಿರಣ್ ಮೋರಸ್ ಮಾತನಾಡಿ, ಜನರಲ್ಲಿ ಸೇವಾ ಮನೋಭಾವ, ರಾಷ್ಟ್ರೀಯ ಮನೋಭಾವ ಕಡಿಮೆ ಆಗುತ್ತಿದೆ. ಸೇವಾದಳ ಘಟಕವು ಯುವಕರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ಸಹಕಾರ ಭಾವ ಮೂಡಿಸುವ ಮೂಲಕ ಅವರಲ್ಲಿ ರಾಷ್ಟ್ರಪ್ರೇಮ ಮೂಡಿಸಬೇಕು ಎಂದು ಹೇಳಿದರು.</p>.<p>ಸೇವಾದಳ ಯುವ ಬ್ರಿಗೇಡ್ ರಾಜ್ಯ ಘಟಕದ ಅಧ್ಯಕ್ಷ ಪಿ.ಕೆ.ಜುನೈದ್, ಸೇವಾ ಮನೋಭಾವದಿಂದ ಎಲ್ಲರೂ ಕೆಲಸ ಮಾಡಲು ಮುಂದಾಗಬೇಕು. ಸೇವಾದಳವು ನಿಸ್ವಾರ್ಥ ಸೇವಾ ಸಂಘಟನೆ ಆಗಿದೆ ಎಂದು ಹೇಳಿದರು.</p>.<p>ನಿಖಿತ್ ರಾಜ್ ಮೌರ್ಯ ಮಾತನಾಡಿ, ಜಾತಿ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯತೆಯನ್ನು ಮೂಡಿಸಬೇಕು ಎಂದು ಹೇಳಿದರು.</p>.<p>ಕೆಪಿಸಿಸಿ ಮಾಜಿ ಕಾರ್ಯದರ್ಶಿ ಇಕ್ಬಾಲ್ ಅಹ್ಮದ್, ಸೇವಾದಳ ಯುವ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ಮಧು, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗುರುಪ್ರಸಾದ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈನ್ ಶೇಖ್ ಫಯಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>