ಪರ್ಯಾಯ ಯೋಜನೆ: ಸ್ಮಾರ್ಟ್ ಸಿಟಿ ಅಧಿಕಾರಿಗಳು ರಾಜಗಾಲುವೆ ಮುಚ್ಚುವ ಮುನ್ನ ಅದಕ್ಕೆ ಪರ್ಯಾಯವಾಗಿ ಯೋಜನೆ ರೂಪಿಸಿ ಚರಂಡಿಯ ಕೊಳಚೆ ನೀರು ಸರಾಗವಾಗಿ ಬೇರೆಡೆ ಹರಿದು ಹೋಗುವ ವ್ಯವಸ್ಥೆ ಮಾಡಿಲ್ಲ. ಹಾಗಾಗಿ ಮನೆಗಳಿಗೆ ನುಗ್ಗುತ್ತಿದೆ. ಕುಡಿಯುವ ನೀರಿನ ಜತೆಗೆ ಕಲುಷಿತ ನೀರು ಸೇರಿಕೊಳ್ಳುತ್ತಿದೆ. ಅದೇ ನೀರು ಕುಡಿದು ಬದುಕುವಂತಾಗಿದೆ. ತಕ್ಷಣ ಸರಿಪಡಿಸಬೇಕು ಎಂದು ವಾರ್ಡ್ನ ಮುಖಂಡರಾದ ಶ್ರೀನಿವಾಸ್, ಗಣೇಶ್, ಶಿವಣ್ಣ, ರಾಜಣ್ಣ, ಚಿಕ್ಕಸಿದ್ದಯ್ಯ, ನರಸೇಗೌಡ ಒತ್ತಾಯಿಸಿದರು.