‘ಭೂ ಸ್ವತ್ತಿಗೆ ಸಂಬಂಧಿಸಿದಂತೆ ಶಂಕರಪ್ಪ ಎಂಬ ಡೆವಲಪರ್ ಮತ್ತು ರಾಜೇಶ್ ಸೇರಿಕೊಂಡು ನನ್ನ ಪತಿ ಹೆಸರಿನಲ್ಲಿ ಅಗ್ರಿಮೆಂಟ್ ಮಾಡಿ ನನಗೆ ವಂಚಿಸುವ ಹುನ್ನಾರ ನಡೆಸಿದ್ದಾರೆ. ಇದನ್ನು ವಿರೋಧಿಸಿದ್ದಕ್ಕೆ ಏ. 29ರಂದು ಉದ್ದೇಶ ಪೂರ್ವಕವಾಗಿ ನನ್ನ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಸಭ್ಯವಾಗಿ ನಡೆದುಕೊಂಡು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೂಡಲೇ ಪೊಲೀಸ್ ಠಾಣೆಗೆ ಕರೆ ಮಾಡಿದ್ದು, ನಂತರ ಕಚೇರಿಯಿಂದ ಓಡಿ ಹೋಗಿದ್ದಾರೆ’ ಎಂದು ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.