ಮಧುಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶಿಕ್ಷಕ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ತಾಲ್ಲೂಕಿನ ರಂಟವಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಂಭಾಗ ಸೋಮವಾರ ಪೋಷಕರು ಪ್ರತಿಭಟನೆ ನಡೆಸಿದರು.
ಶಿಕ್ಷಕ ಲಕ್ಷ್ಮಿಕಾಂತ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಹಿಂಸೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಶಾಲೆ ಮುಖ್ಯ ಶಿಕ್ಷಕ ಕಾಮಣ್ಣ ಅವರಿಗೆ ನ.24ರಂದು ದೂರು ನೀಡಿದರೂ ಮೇಲಧಿಕಾರಿಗೆ ದೂರು ನೀಡದೆ ಅಸಡ್ಡೆ ತೋರಿದ್ದಾರೆ ಎಂದು ಆರೋಪಿಸಿದರು.
ವಿಷಯ ತಿಳಿದ ಬಿಇಒ ಹನುಮಂತರಾಯಪ್ಪ ಹಾಗೂ ಸಿಡಿಪಿಒ ಕಮಲ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಹೇಳಿಕೆ ಮತ್ತು ಪೋಷಕರ ದೂರು ಸ್ವೀಕರಿಸಿದರು. ಬಡವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.