ತುಮಕೂರು: ಎಸ್ಎಫ್ಸಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಪಾಲಿಕೆ ಸದಸ್ಯೆ ನಾಜೀಮಾ ಬೀ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಮನವಿ ಸಲ್ಲಿಸಿದ್ದಾರೆ.
2019–20ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಡಿ ಮಹಾನಗರ ಪಾಲಿಕೆಗೆ ₹15 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈ ಅನುದಾನಕ್ಕೆ ರೂಪಿಸಿರುವ ಕ್ರಿಯಾ ಯೋಜನೆಯಲ್ಲಿ ವಾರ್ಡ್ವಾರು ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.
ಮನವಿಗೆ ಸಂಬಂಧಿಸಿದಂತೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮನವಿಯನ್ನು ಪಾಲಿಕೆ ಆಯುಕ್ತರಿಗೆ ರವಾನಿಸಿ, ಈ ಕುರಿತು ನಿಯಮಾನುಸಾರ ಕ್ರಮವಹಿಸಲು ಹಾಗೂ ತೆಗೆದುಕೊಂಡ ಕ್ರಮದ ಕುರಿತು ಸದಸ್ಯರಿಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.